Advertisement

ವಿದ್ಯಾರ್ಥಿಗಳಿಗೆ ರಾಷ್ಟ್ರ ಪ್ರೇಮ ಬಿಂಬಿಸುವ ಸ್ಪರ್ಧೆ ಆಯೋಜನೆ: ಸೂಚನೆ

10:49 PM Jul 28, 2022 | Team Udayavani |

ಬೆಂಗಳೂರು:  ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ  ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

Advertisement

ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಮದ್ರಸಾಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ರಾಷ್ಟ್ರಭಕ್ತಿ ಮೂಡಿಸುವುದಕ್ಕಾಗಿ ಗಾಯನ, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಹೋರಾಟ ಗಾರರ ವೇಷಭೂಷಣ ಹಾಗೂ ರಾಷ್ಟ್ರ ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ  ಬಹುಮಾನ  ವಿತರಿಸುವಂತೆ ತಿಳಿಸಲಾಗಿದೆ.

1ರಿಂದ 3ನೇ ತರಗತಿ ಮಕ್ಕಳಿಗೆ ರಾಷ್ಟ್ರ ಧ್ವಜದ ಚಿತ್ರ ಬಿಡಿಸುವುದು, ವೇಷಭೂಷಣ ಸ್ಪರ್ಧೆ, 4ರಿಂದ 5ನೇ ತರಗತಿ ಮಕ್ಕಳಿಗೆ ದೇಶಭಕ್ತಿ ಗೀತೆ ಗಾಯನ, ಭಾಷಣ ಸ್ಪರ್ಧೆ, 6ರಿಂದ 10ನೇ ತರಗತಿ ಮಕ್ಕಳಿಗೆ ರಾಷ್ಟ್ರೀಯ ಭಾವನೆ ಮೂಡಿಸುವ ಗೀತ ಗಾಯನ, ಭಾಷಣ ಮತ್ತು ಸ್ವತಂತ್ರ ಭಾರತದ ಅಭಿವೃದ್ಧಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು  ಇಲಾಖೆ  ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಡಿಸೆಂಬರ್‌ನಲ್ಲೇ ಶುಲ್ಕ ವಿವರ ಪ್ರಕಟಿಸಲು ಸೂಚನೆ : 

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ಪ್ರತಿ ವರ್ಷ ಡಿಸೆಂಬರ್‌ ಅಂತ್ಯದೊಳಗೆ ಶಾಲೆಯ ಸೂಚನಾ ಫ‌ಲಕ ಹಾಗೂ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ಅದರಂತೆ ಶುಲ್ಕ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

Advertisement

ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಒಂದೇ ಮಾನದಂಡದ ರೂಪದಲ್ಲಿ ಬೋಧನ ಶುಲ್ಕ ಹಾಗೂ ಇತರ ಶುಲ್ಕಗಳನ್ನು ಲೆಕ್ಕಾಚಾರ ಮಾಡಿ ಪಡೆದುಕೊಳ್ಳಲು ಹೈಕೋರ್ಟ್‌ ನಿರ್ದೇಶನ ನೀಡಿದೆ. ಆ ಪ್ರಕಾರ ಎಲ್ಲ  ಶಾಲೆಗಳು ಡಿಸೆಂಬರ್‌ನೊಳಗೆ ತಮ್ಮ ಶುಲ್ಕ ವಿವರಗಳನ್ನು ಪ್ರಕಟಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಅದರಂತೆ 2023-24ನೇ ಶೈಕ್ಷಣಿಕ ಸಾಲಿನ ಶುಲ್ಕದ ವಿವರಗಳನ್ನು ಈ ಡಿಸೆಂಬರ್‌ನಲ್ಲಿಯೇ ಪ್ರಕಟಿಸುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next