Advertisement

ಕ್ಯಾನ್ಸರ್‌ ಪೀಡಿತರಿಗೆ ಕೇಶದಾನ: 11ರ ಪೋರನ ಮಾದರಿ ಕಾರ್ಯ

12:07 AM Jun 01, 2023 | Team Udayavani |

ಸುಳ್ಯ: ಹನ್ನೊಂದು ವರ್ಷದ ಬಾಲಕನೊಬ್ಬ ಮೂರು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿ ಯಾಗಿದ್ದಾನೆ.

Advertisement

ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದ ಮಣಿಯೂರಿನ ನವೀನ್‌ ರಾವ್‌-ಸಿಂಧ್ಯಾ ಹಾಗೂ ಭವಾನಿ ದಂಪತಿಯ 11 ವರ್ಷ ಪ್ರಾಯದ ಪುತ್ರ ರತೀಶ್‌ ಸಿ. ಕೇಶದಾನ ಮಾಡಿರುವ ಬಾಲಕ. ಈತ ಮುಳ್ಳೇರಿಯಾದ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ಕಲಿಯುತ್ತಿದ್ದಾಗಲೇ ತನ್ನ ಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡಬೇಕೆನ್ನುವ ಸಂಕಲ್ಪ ಕೈಗೊಂಡಿದ್ದನು. ಆಗ ಈತನಿಗೆ 8 ವರ್ಷ ಪ್ರಾಯವಿತ್ತು. ಹೆತ್ತವರು ಮಗನ ಇಚ್ಛೆಗೆ ಒಪ್ಪಿಗೆ ಕೊಟ್ಟಿದ್ದರು.

ಮೂರು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಆತ ಇದೀಗ ಕತ್ತರಿಸಿ ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಉದಯಭಾಸ್ಕರ್‌ ಅವರ ಮೂಲಕ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾನೆ.

ರತೀಶ್‌ ಪ್ರಸ್ತುತ ಈಶ್ವರಮಂಗಲದ ಶ್ರೀ ಗಜಾನನ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next