Advertisement

ಕೋವಿಡ್ ಹೆಚ್ಚಳ: ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರು ಈ ನಿಯಮಗಳನ್ನು ಪಾಲಿಸಲೇಬೇಕು!

02:02 PM Jul 31, 2021 | Team Udayavani |

ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹಲವು ನಿರ್ಬಂಧಗಳನ್ನು ವಿಧಿಸಿದೆ.

Advertisement

ಈ ಎರಡು ರಾಜ್ಯಗಳಿಂದ ಕರ್ನಾಟಕಕ್ಕೆ ವಿಮಾನ, ರೈಲು, ಬಸ್, ಖಾಸಗಿ ವಾಹನಗಳಲ್ಲಿ ಪ್ರವೇಶ ಮಾಡುವ ಪ್ರಯಾಣಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

ಕೇರಳ ಮತ್ತು ಮಹಾರಾಷ್ಟ್ರಗಳಿಂದ ರಾಜ್ಯಕ್ಕೆ ಬರುವವರು ಎರಡು ಡೋಸ್ ಲಸಿಕೆ ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರಬೇಕು. ವಿಮಾನ, ರೈಲು, ಬಸ್, ಖಾಸಗಿ ವಾಹನಗಳಲ್ಲಿ ಕರ್ನಾಟಕಕ್ಕೆ ಪ್ರವೇಶಿಸುವ ಎಲ್ಲರಿಗೂ ಇದು ಅನ್ವಯವಾಗುತ್ತದೆ.

ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಸಲ, ವ್ಯಾಪಾರ ಸೇರಿದಂತೆ ದಿನನಿತ್ಯ ಓಡಾಡುವವರು ಪ್ರತಿ 15 ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹೊಂದಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next