Advertisement

ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ 

07:05 AM May 24, 2018 | Team Udayavani |

ರಾಮನಗರ/ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮೊದಲು ಕುಮಾರಸ್ವಾಮಿ ಅವರು ಪತ್ನಿ ಅನಿತಾ ಜೊತೆ ಮೈಸೂರಿಗೆ ತೆರಳಿ ಚಾಮುಂಡಿ ದೇವಿಯ ದರ್ಶನ ಪಡೆದರು. ಬಳಿಕ, ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಕೆಲಕಾಲ ಸ್ವಾಮೀಜಿ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿದರು.

Advertisement

ದರ್ಗಾ, ಚರ್ಚ್‌ಗೂ ಭೇಟಿ: ಬಳಿಕ, ಮಧ್ಯಾಹ್ನ 12.30ರ ವೇಳೆಗೆ ಹೆಲಿಕಾಪ್ಟರ್‌ ಮೂಲಕ ರಾಮನಗರದ ಹೆಲಿಪ್ಯಾಡ್‌ಗೆ ಆಗಮಿಸಿದರು. ನಂತರ, ಸಂತ ಲೂರ್ದು ಮಾತೆ ಚರ್ಚ್‌ಗೆ ತೆರಳಿದರು. ಅರ್ಕಾವತಿ ನದಿ ದಂಡೆಯ ಮೇಲಿರುವ ಪೀರನ್‌ ಷಾವಲಿ ದರ್ಗಾಕ್ಕೆ ಭೇಟಿ ಕೊಟ್ಟು ತಮ್ಮ ಭಕ್ತಿ ನಿವೇದಿಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next