Advertisement

CM ಬದಲಾಗುತ್ತಾರೆ ಎಂಬುದು ಊಹಾಪೋಹ: ಯತೀಂದ್ರ ಸಿದ್ದರಾಮಯ್ಯ

11:31 PM Mar 04, 2024 | Team Udayavani |

ಹೊಳೆನರಸೀಪುರ: ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬುದೆಲ್ಲ ಊಹಾಪೋಹ. ಕಾಂಗ್ರೆಸ್‌ ಸರಕಾರ ಐದು ವರ್ಷ ತನ್ನ ಅವಧಿ ಪೂರೈಸಲಿದ್ದು, ಸಿದ್ದರಾಮಯ್ಯ ಅವರೇ ಅವಧಿಪೂರ್ತಿ ಮುಖ್ಯಮಂತ್ರಿ ಆಗಿರುತ್ತಾರೆ ಎನ್ನುವುದು ನನ್ನ ನಂಬಿಕೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Advertisement

ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಮುಂದೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಕೆಲವು ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲ ಸರಕಾರ ಇದ್ದಾಗಲೂ ಇಂಥ ಭಿನ್ನ ಅಭಿಪ್ರಾಯಗಳು ಇದ್ದೇ ಇರುತ್ತದೆ. ಬಿಜೆಪಿ ಸರಕಾರ ಇದ್ದಾಗ ಎಷ್ಟೋ ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು. ಅವರ ಬೆಂಬಲಿಗರು ಕೂಡ ತಮ್ಮ ನಾಯಕರ ಪರವಾಗಿ ಮಾತನಾಡಿದ್ದರು ಎಂದು ಹೇಳಿದರು.

ನಾನು ಟಿಕೆಟ್‌ ಕೇಳಿಲ್ಲ
ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಪಕ್ಷದ ವರಿಷ್ಠರು ಇನ್ನೂ ತೀರ್ಮಾನಿಸಿಲ್ಲ. ನಾನಂತೂ ಟಿಕೆಟ್‌ ಬೇಕು ಎಂದು ಕೇಳಿಲ್ಲ. ನಾನು ಆಕಾಂಕ್ಷಿಯೂ ಅಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next