ನೀಡಿರುವ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, “ಸದ್ಯಕ್ಕೆ ಈಗಿರುವ ವ್ಯವಸ್ಥೆಯೇ ಮುಂದುವರಿಯಲಿದೆ’ ಎಂದು ಹೇಳಿದ್ದಾರೆ.
Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು “ವಾಣಿಜ್ಯ ವಾಹನಗಳಿಗೆ ಅರ್ಹತಾ ಪ್ರಮಾಣಪತ್ರ ನೀಡುವಾಗ ಈಗಿರುವ ವ್ಯವಸ್ಥೆ ಏನಿದೆಯೋ ಸದ್ಯಕ್ಕೆ ಅದೇ ವ್ಯವಸ್ಥೆ ಮುಂದುವರಿಯಲಿದೆ. ಅರ್ಹತಾ ಪ್ರಮಾಣಪತ್ರ ನೀಡುವಾಗ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯವಾಗಿರಬೇಕೆಂದು ಆದೇಶ ಹೊರಡಿಸಿಲ್ಲ. ಈ ಸಂಬಂಧದ ಕಡತ ನನ್ನ ಬಳಿಯೇ ಇದೆ. ಪರಿಶೀಲಿಸುವುದಾಗಿ ಹೇಳಿದ್ದೇನೆ ಅಷ್ಟೇ’ ಎಂದು ಸ್ಪಷ್ಟಪಡಿಸಿದರು.
ಸ್ಪೀಡ್ ಗವರ್ನರ್ ಬೆಲೆ 3ರಿಂದ 4 ಸಾವಿರ ರೂ. ಇದೆ. ಆದರೆ, ಕರ್ನಾಟಕದಲ್ಲಿ ನಾಲ್ಕೈದು ಪಟ್ಟು ಹೆಚ್ಚಿದೆ. ತಕ್ಷಣ ಸರ್ಕಾರ ಈ ನಿರ್ಧಾರ ಹಿಂಪಡೆಯಬೇಕು. ಇಲ್ಲದಿದ್ದರೆ ಮುಷ್ಕರಕ್ಕೆ ನಾವೂ ಕೈಜೋಡಿಸಲಿದ್ದೇವೆ’ ಎಂದು ಹೇಳಿದರು.
Related Articles
ವಾಣಿಜ್ಯ ಉದ್ದೇಶದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿದ್ದಾಗಲೇ ಆದೇಶವಾಗಿತ್ತು. ಅದು ಈಗ ಅಧಿಸೂಚನೆಯಾಗಿ ಹೊರ ಬಂದಿದೆ. ಇದು ಗೊಂದಲಕ್ಕೆ ಮೂಲ ಕಾರಣ. ಕೇಂದ್ರ ಮೋಟಾರು ವಾಹನ ಕಾಯ್ದೆ-1989ರ ನಿಯಮ 118 (2)ರಡಿ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದಕ್ಕೆ ಹಿಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಹಿ ಹಾಕಿದ್ದಾರೆ. ತದನಂತರ ಅಧಿಸೂಚನೆ ಹೊರಡಿಸಲಾಗಿದೆ. ಈಗಿನ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರ ಗಮನಕ್ಕೆ ಇದು ಬಂದಿಲ್ಲ. ಹಾಗಾಗಿ, ತಾವು ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ತಿಳಿಸಿದ್ದಾರೆ. ಇದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.
Advertisement