Advertisement

ವೇಗವಾಗಿ ಬಂದ ಲಾರಿ ಬ್ಯಾರಿಕೇಡ್ ಗೆ ಢಿಕ್ಕಿ; ಕರ್ತವ್ಯ ನಿರತ ಪೊಲೀಸರು ಪವಾಡಸದೃಶವಾಗಿ ಪಾರು

09:02 AM Apr 17, 2020 | Hari Prasad |

ಶಿವಮೊಗ್ಗ: ಖಾಲಿ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿಯೊಂದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬರು ಸಬ್ ಇನ್ ಸ್ಪೆಕ್ಟರ್ ಹಾಗೂ ಮೂವರು ಪೊಲೀಸ್ ಪೇದೆಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

Advertisement

ನಗರದ ವಿದ್ಯಾನಗರ ಪೊಲೀಸ್ ಠಾಣೆಯ ಬಳಿ ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಲಾಕ್ ಡೌನ್ ಕಾರಣದಿಂದ ರಸ್ತೆ ಖಾಲಿ ಇದ್ದುದರಿಂದ ಲಾರಿ ಚಾಲಕ ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದಾನೆ. ಬಳಿಕ ಪೊಲೀಸ್ ಬ್ಯಾರಿಕೇಡ್ ಕಂಡು ತಬ್ಬಿಬ್ಬುಗೊಂಡ ಚಾಲಕ ಲಾರಿಯನ್ನು ನಿಂಯಂತ್ರಿಸಲು ವಿಫಲನಾಗಿ ನೇರವಾಗಿ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದಿದ್ದಾನೆ.

ಈ ಸಂದರ್ಭದಲ್ಲಿ ಗಾಬರಿಗೊಂಡ ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗುವ ಯತ್ನದಲ್ಲಿದ್ದಾಗ ಸಕಾಲದಲ್ಲಿ ಕರ್ತವ್ಯ ಪ್ರಜ್ಞೆಯನ್ನು ಮೆರೆದ ಪೊಲೀಸರು ಲಾರಿಯನ್ನು ಬೆನ್ನಟ್ಟಿಕೊಂಡು ಹೋಗಿ ತುಂಗಾ ಸೇತುವೆಯಲ್ಲಿ ಲಾರಿ ಸಹಿತ ಚಾಲಕನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next