Advertisement

Sharad Pawar ಪ್ರತಿಪಕ್ಷಗಳ ಸಭೆಗೆ ಬರುತ್ತಿದ್ದಾರೆ: ಖರ್ಗೆ ಸ್ಪಷ್ಟನೆ

03:29 PM Jul 17, 2023 | Team Udayavani |

ಬೆಂಗಳೂರು:  ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಜುಲೈ 18 ರಂದು ಬೆಂಗಳೂರಿನ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಹೇಳಿದ್ದಾರೆ.

Advertisement

ಸುದ್ದಿಗಾರರು ಪವಾರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ನಾನು ಹಿಂದಿನ ದಿನ ಪವಾರ್ ಜೊತೆ ಮಾತನಾಡಿದ್ದೇನೆ. ಇಂದು ಮಹಾರಾಷ್ಟ್ರ ಅಸೆಂಬ್ಲಿ ಪ್ರಾರಂಭವಾಗುತ್ತಿದೆ ಮತ್ತು ಅವರು ಮುಂಬೈನಲ್ಲಿ ಇರಲು ಬಯಸಿದ್ದಾರೆ. ಆದರೆ ನಾಳೆ ಸಭೆಗೆ ಹಾಜರಾಗಲಿದ್ದಾರೆ. ಅವರು ಬರುವುದು ಮುಖ್ಯ ಎಂದು ಹೇಳಲು ನಾನು ಅವರಿಗೆ ಕರೆ ಮಾಡಿದೆ.ಅವರು ಜುಲೈ 18 ರಂದು ಬೆಳಗ್ಗೆ ಬರುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಸೋಮವಾರದ ವಿಪಕ್ಷಗಳ ಸಭೆಗೆ ಪವಾರ್ ಗೈರಾಗಿ ಮಂಗಳವಾರ ಪಾಲ್ಗೊಳ್ಳಲಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ವಿರೋಧ ಪಕ್ಷಗಳ ಅಧಿಕೃತ ಸಭೆ ಮಂಗಳವಾರ ನಡೆಯಲಿದೆ.ಇಂದು (ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಔತಣಕೂಟವನ್ನು ಆಯೋಜಿಸುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next