Advertisement
ಅವರು ಶನಿವಾರ ಹಂಗಾರಕಟ್ಟೆ “ಚೇತನಾ ಪ್ರೌಢ ಶಾಲಾ ಕ್ರೀಡಾಂಗಣ’ದಲ್ಲಿ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ “ಸೌಹಾರ್ದ ಸಂಭ್ರಮ-2023′ ಉದ್ಘಾಟಿಸಿ ಮಾತನಾಡಿದರು.
ಶಾಸಕ, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾತನಾಡಿ, ಕ್ರೀಡಾಕೂಟವು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ. ಜತೆಗೆ ಒಗ್ಗಟ್ಟು, ಆರೋಗ್ಯಪೂರ್ಣ ವಾತಾವರಣಕ್ಕೆ ಪೂರಕ ಎಂದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ. ಅಧ್ಯಕ್ಷತೆ ವಹಿಸಿದ್ದರು.
Related Articles
Advertisement
ಸೌಹಾರ್ದ ಸಹಕಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಸ್ವಾಗತಿಸಿ, ವಿಜಯ್ ವಂದಿಸಿದರು. ಸತೀಶ್ಚಂದ್ರ ಚಿತ್ರಪಾಡಿ ನಿರೂಪಿಸಿದರು.
ಕಾಪು, ಉಡುಪಿ, ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ಕುಂದಾಪುರ ತಾಲೂಕುಗಳನ್ನು 7 ವಲಯಗಳನ್ನಾಗಿ ರಚಿಸಲಾಗಿತ್ತು. ಸಹಕಾರಿಯ ಆಡಳಿತ ಮಂಡಳಿ, ಸಿಬಂದಿ, ಸಿಬಂದಿಯೇತರರು ಸೇರಿದಂತೆ 2 ಸಾವಿರಕ್ಕೂ ಅಧಿಕ ಮಂದಿ ಸೌಹಾರ್ದ ಸಹಕಾರಿಗಳು ಕ್ರೀಡೋತ್ಸವದಲ್ಲಿ ಭಾಗವಹಿಸಿದರು. ಸಹಕಾರಿ ಸಾಧಕರಿಗೆ ಸಮ್ಮಾನ, ಪ್ರಶಸ್ತಿ ಪ್ರದಾನ ನೆರವೇರಿತು.