Advertisement

ಒಳ್ಳೇ ತಾಣಕ್ಕೆ,ಚಾರಣ:ತೊಟ್ಟಿಕಲ್ಲು ಜಲಪಾತ

03:02 PM Mar 24, 2018 | |

 ವಾರಾಂತ್ಯದಲ್ಲಿ ಒಂದು ದಿನದ ಪ್ರವಾಸಕ್ಕೆ ತೊಟ್ಟಿಕಲ್ಲು ಜಲಪಾತ ಸೂಕ್ತ. ಅಲ್ಲಿ ಯಾವುದೇ ಫ‌ಲಾಹಾರ ಮಂದಿರವಾಗಲಿ, ಖಾನಾವಳಿಯಾಗಲಿ ಇಲ್ಲ. ಕುಡಿಯುವ ನೀರು ಸಮೇತ ಅಗತ್ಯ ಪ್ರಮಾಣದಷ್ಟು ಬುತ್ತಿ ಒಯ್ದರೆ ಸರಿ. ಭದ್ರತೆಯ ಕೊರತೆಯೂ ಇದೆ ಅನ್ನೋ ಎಚ್ಚರಿಕೆ ಚಾರಣ ಹೋಗುವವರಿಗೆ ಇರಲಿ.  

Advertisement

   ಅರೆ! ಇಷ್ಟು ಚೆಂದದ ತಾಣ ಇಲ್ಲೇ ಇತ್ತಲ್ಲ? ನೋಡದೆ ಹೋದೆನಲ್ಲ ಅಂತ ಅನ್ನಿಸೀತು ಆ ತಾಣ ತಲಪಿದಾಗ. ಅದುವೇ ಬೆಂಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಕೇವಲ 28 ಕಿ.ಮೀ. ದೂರದಲ್ಲಿರುವ “ತೊಟ್ಟಿಕಲ್ಲು ಜಲಪಾತ’. ರಾಷ್ಟ್ರೀಯ ಹೆದ್ದಾರಿ 209 ಆದ ಬೆಂಗಳೂರು-ಕನಕಪುರ ರಸ್ತೆ ಹಿಡಿದು 23 ಕಿ. ಮೀ. ದೂರದಲ್ಲಿರುವ ಕಗ್ಗಲಿಪುರ ತಲಪಲು ರಾಜ್ಯ ಸಾರಿಗೆ/ಸಿಟಿ ಬಸ್‌ ಸೌಕರ್ಯಕ್ಕೆ ಕೊರತೆ ಇಲ್ಲ. ಅಲ್ಲಿ ಎಡಕ್ಕೆ ಹರಿಯುವ ರಸ್ತೆಯಲ್ಲಿ ಒಂದೂವರೆ ಕಿ.ಮೀ. ಸಾಗಿದರೆ ಗುಳಕಮಲೆ ಗ್ರಾಮ. ತುಸು ಮುಂದೆ ಕ್ಯಾಡ್‌ ಬಾಮ್‌ ಆಸ್ಪತ್ರೆ ಬಳಿ ಎಡಕ್ಕೆ ಸಾಗುತ್ತಲೇ ಜಲ್ಲಿ ರಸ್ತೆಯೊಂದು ನಿಮ್ಮ ಗಮನ ಸೆಳೆಯುತ್ತದೆ.  ಇಲ್ಲಿಂದ ಮುಂದಕ್ಕೆ ನೀವು ಎರಡು ಕಿ.ಮೀ. ಸಹಿಸಿಕೊಂಡರಾಯಿತು. ನಿಮ್ಮನ್ನು ಜಲಪಾತಕ್ಕೆ ಮುಟ್ಟಿಸುವ ಹೊಣೆ ನನ್ನದು ಎಂದಿರುತ್ತದೆ ಅದು. ಬೈಕ್‌ಗೆ ಸಲೀಸು. ಆದರೆ ನಡಿಗೆಯೆ ಆಪ್ಯಾಯಮಾನ. ಕಾರು, ವ್ಯಾನಿಗೆ ಸುತ್ತುದಾರಿಯೂ ಇದೆಯೆನ್ನಿ. 

ಜಲಪಾತಕ್ಕೂ ಮಿಗಿಲಾಗಿ ಅದನ್ನು ತಲುಪಿಸುವ  ಹಾದಿ ಸೊಗಸು. ನೀರವತೆ. ಇಕ್ಕೆಲದಲ್ಲೂ ಕಣ್ಣಿಗೆ ತಂಪೆರೆಯುವ ಹೊಲ, ಗದ್ದೆ, ಗಿಡಮರಗಳು. ಅಲ್ಲಲ್ಲಿ ಕೆರೆ, ಕುಂಟೆ. ದೂರದಲ್ಲಿ ಹಸಿರೊದ್ದ ಗಿರಿಸಾಲು. ಗುಡಿಸಲು, ಜಾನುವಾರು ….. ಒಟ್ಟಾರೆ ಸುತ್ತಮುತ್ತಲೂ ಅಪ್ಪಟ ದೇಸಿ ವಾತಾವರಣ. ಈ ಹಿತಕರ ಪರಿಸರ ಕಂಡಾಗಲೇ ನಮ್ಮ ಯಾತ್ರೆ ಫ‌ಲಪ್ರದ  ಎಂಬ ಸಾರ್ಥಕ ಭಾವ ಜೊತೆಯಾಗುತ್ತದೆ.  ಬನ್ನೇರುಘಟ್ಟ ಸೇರಿ ಅಲ್ಲಿನ ಪೊಲೀಸ್‌ ಠಾಣೆ ಎದುರಿನ ಕಿರು ರಸ್ತೆಯಲ್ಲಿ 15 ಕಿ.ಮೀ. ಪ್ರಯಾಣಿಸಿ. ಅಲ್ಲಿಂದ 15 ನಿಮಿಷಗಳ ನಡೆದರೆ ಜಲಪಾತ ಸಿಗುತ್ತದೆ.  ಚಾರಣಕ್ಕೆ ಈ ಹಾದಿ ಚೇತೋಹಾರಿ.

ಜಲಧಾರೆ ವೀಕ್ಷಿಸಲು ಕಡಿದಾದ ಬಂಡೆಗಳನ್ನೇರಬೇಕು. ಮೆಟ್ಟಿಲುಗಳಿಲ್ಲ. ವೃದ್ಧರು ಬಹುತೇಕ ಇನ್ನು ಸಾಕೆಂದು ಬಂದ ಹಾದಿಯತ್ತ ದಿಟ್ಟಿಸುವುದುದಿದೆ. ನೀವು ಯೋಗಪಟುವಾದರೆ ಆರೋಹಣ ಸರಾಗ.  ಅಂದಹಾಗೆ ಜಲಪಾತಕ್ಕೆ ಮಳೆಗಾಲದಲ್ಲಷೆ r ಪೂರ್ಣ ಕಳೆ.  ಆಗಸ್ಟ್‌- ಡಿಸೆಂಬರ್‌ ಅವಧಿಯಲ್ಲಿ ಪ್ರವಾಸ ಚಲೋ. ನೂರು ಅಡಿಗಳ ಎತ್ತರದಿಂದ ದುಮ್ಮಿಕ್ಕುವ ನೀರು ಬಳುಕುತ್ತ  ಬಂಡೆಯಿಂದ ಬಂಡೆಗೆ ಕುಪ್ಪಳಿಸುವಂತೆ ತೋರುತ್ತದೆ. ಪ್ರತಿಯೊಂದು ಬಂಡೆಯೂ ಶಿವ‌ಲಿಂಗದಂತೆ ಕಂಡು ಅದರ ಮೇಲೆ ಬಿಡಿ ಮಲ್ಲಿಗೆ ಅರ್ಚನೆಯಾಗುತ್ತಿರಬಹುದೆಂದೂ ಭಾಸವಾಗುತ್ತದೆ.  ಜಲಧಾರೆಯ ಮೂಲ ಬನ್ನೇರುಘಟ್ಟದ ಸುವರ್ಣಮುಖೀ ನದಿ. ವರ್ಷದ ಉಳಿದ ಅವಧಿಯಲ್ಲಿ ಕೇವಲ ತೊಟ್ಟಿಕ್ಕುವ ಕಲ್ಲಿನಂತೆ ಕಾಣುತ್ತದೆ! ನಿಜಕ್ಕೂ ಅಲ್ಲಿ ಜಲಪಾತವುಂಟೆ ಅನ್ನಿಸುತ್ತದೆ. ಚಾರಣವನ್ನು ಬೇಗ ಮುಗಿಸಿ ಹೊರಟರೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೂ ಭೇಟಿ ನೀಡಬಹುದು.

 ಮೋಜು , ಮನೋರಂಜನೆಯೆ ಮೇಲಾದರೆ ಯಾವುದೇ  ಪ್ರೇಕ್ಷಣೀಯ ನೆಲೆಗೆ ಗರ ಬಡಿಯುತ್ತದೆ. ‘ತೊಟ್ಟಿಕಲ್ಲು ಜಲಪಾತಕ್ಕೂ  ಆ ಪಾಡು ಒದಗಿದೆ. ಅಲ್ಲಲ್ಲಿ ತಿಂದೊಗೆದ ಕಾಗದದ ತಟ್ಟೆಗಳು, ಲೋಟಗಳು, ಪ್ಲಾಸ್ಟಿಕ್‌ ಚೀಲಗಳು.  ನೀರಿನ ಬಾಟಲ್‌ಗ‌ಳು ಬಿದ್ದಿವೆ. ಜಲಪಾತ ವೀಕ್ಷಣೆಗೆ ಬಂದವರು  ಪರಿಸರ ಸ್ವತ್ಛತೆಗೆ ಗಮನ ಹರಿಸದ ಕಾರಣ, ಪಾರದರ್ಶಕವಾಗಿರಬೆಕಾದ ನಾಲೆಯ ನೀರು ಕಡು ಹಸಿರು ಬಣ್ಣಕ್ಕೆ ತಿರುಗಿದೆ. ಪಕ್ಕದಲ್ಲಿ ಮುನೇಶ್ವರಸ್ವಾಮಿ ದೇವಾಲಯವಿದೆ. ವಾರಾಂತ್ಯದಲ್ಲಿ ಒಂದು ದಿನದ ಪ್ರವಾಸಕ್ಕೆ ತೊಟ್ಟಿಕಲ್ಲು ಜಲಪಾತ ಸೂಕ್ತ. ಅಲ್ಲಿ ಯಾವುದೇ ಫ‌ಲಾಹಾರ ಮಂದಿರವಾಗಲಿ, ಖಾನಾವಳಿಯಾಗಲಿ ಇಲ್ಲ. ಕುಡಿಯುವ ನೀರು ಸಮೇತ ಅಗತ್ಯ ಪ್ರಮಾಣದಷ್ಟು ಬುತ್ತಿ ಒಯ್ದರೆ ಸರಿ. ಭದ್ರತೆಯ ಕೊರತೆಯೂ ಇದೆ ಅನ್ನೋ ಎಚ್ಚರಿಕೆ ಚಾರಣ ಹೋಗುವವರಿಗೆ ಇರಲಿ.  

Advertisement

ಬಿಂಡಿಗನವಿಲೆ ಭಗವಾನ್‌

Advertisement

Udayavani is now on Telegram. Click here to join our channel and stay updated with the latest news.

Next