Advertisement

ಬೆಂಗಳೂರಿನಲ್ಲಿ ‘ಸ್ಪೈ’ ಪ್ರಚಾರ

04:38 PM Jun 29, 2023 | Team Udayavani |

ನಿಖಿಲ್‌ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್‌ ಇಂಡಿಯಾ ಸಿನಿಮಾ ಸ್ಪೈ ಇದೇ 29ಕ್ಕೆ ರಿಲೀಸ್‌ ಆಗುತ್ತಿದೆ. ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಇತ್ತೀಚೆಗೆ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ, ಸಿನಿಮಾದ ಪ್ರಚಾರದಲ್ಲಿ ತೊಡಗಿತ್ತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ನಟ ನಿಖಿಲ್‌ ಸಿದ್ಧಾರ್ತ್,”ಕಾರ್ತಿಕೇಯ ಸಿನಿಮಾಗೆ ಕರ್ನಾಟದಲ್ಲಿ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ. ಕನ್ನಡ ಪ್ರಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್‌ 29ಕ್ಕೆ ಬರುತ್ತಿರುವ ಸ್ಪೈಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್‌ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆ್ಯಕ್ಷನ್‌, ಎಂಟರ್‌ಟೈನರ್‌ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು’ ಎಂದರು.

ಚಿತ್ರದಲ್ಲಿ ಐಶ್ವರ್ಯಾ ಮೆನನ್‌ ನಾಯಕಿಯಾಗಿ ನಟಿಸಿದ್ದಾರೆ. “ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್‌ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ’ ಎಂದರು.

ಸುಭಾಷ್‌ ಚಂದ್ರ ಬೋಸ್‌ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next