Advertisement

Perdoor ಶ್ರೀ ಅನಂತಪದ್ಮನಾಭ ದೇವಸ್ಥಾನ: ಶ್ರೀಮನ್ಮಹಾರಥೋತ್ಸವ ಸಂಪನ್ನ

12:04 AM Mar 17, 2024 | Team Udayavani |

ಹೆಬ್ರಿ: ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶನಿವಾರ ಶ್ರೀಮನ್ಮಹಾರಥೋತ್ಸವ ಸಂಪನ್ನಗೊಂಡಿತು.

Advertisement

ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಜಯರಾಮ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಪ್ರಧಾನ ಹೋಮ, ಕಲಶಾಭಿಷೇಕ, ರಥಹೋಮ, ರಥಸಂಪ್ರೋಕ್ಷಣೆ, ಕೊಡಿಪೂಜೆ, ಮಹಾಪೂಜೆ, ಪೂರ್ವಾಹ್ನ ರಥಾರೋಹಣ ನಡೆದು ಸಂಜೆ ದೇವರ ಮಹಾಹಾರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.

ಮಧ್ಯಾಹ್ನದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ರಾತ್ರಿ ದೀವಟಿಕೆ ಸಲಾಮ್‌, ನರ್ತನ, ವಾದ್ಯ ಸೇವೆ, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಉತ್ಸವ, ತೆಪ್ಪೋತ್ಸವ, ಓಲಗಮಂಟಪ ಪೂಜೆ, ಅಷ್ಟವಧಾನ ಸೇವೆಗಳು, ಮಹಾಪೂಜೆ, ಶ್ರೀ ಭೂತಬಲಿ, ಕವಾಟಬಂಧನ, ಶಯನೋಲಗ ಇತ್ಯಾದಿ ನಡೆದವು.

ದೇವಸ್ಥಾನದ ಆಡಳಿತಾಧಿಕಾರಿ ಗುರುರಾಜ್‌, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ ಇದ್ದರು. ವಿಶೇಷ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸುಗಮ ಸಂಚಾರಕ್ಕೆ ಬಸ್‌ ಮಾರ್ಗದ ಬದಲಾವಣೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next