Advertisement

Maranakatte: ಮಕರ ಸಂಕ್ರಮಣ ಉತ್ಸವ

12:22 AM Jan 16, 2024 | Team Udayavani |

ವಂಡ್ಸೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ. 15ರಂದು ಮಕರ ಸಂಕ್ರಮಣ ಉತ್ಸವ ಸಂಭ್ರಮದಿಂದ ಜರಗಿತು.

Advertisement

ಅರ್ಚಕ ನರಸಿಂಹ ಮಂಜ ನೇತೃತ್ವದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳಿಗೆ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಚಾಲನೆ ನೀಡಿದರು. ಮಹಾಮಂಗಳಾರತಿ ಹಾಗೂ ಮಂಡಲ ಸೇವೆಯಲ್ಲಿ ಉಡುಪಿ, ಶಿವಮೊಗ್ಗ ಸಹಿತ ವಿವಿಧ ಜಿಲ್ಲೆಗಳ 40 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು.

ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೃಷ್ಣಮೂರ್ತಿ ಮಂಜ, ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮದರ್ಶಿ ಕೆರಾಡಿ ಚಂದ್ರಶೇಖರ ಶೆಟ್ಟಿ, ಸಿ. ರಘುರಾಮ ಶೆಟ್ಟಿ, ಸತೀಶ ಕೊಠಾರಿ, ಸುರೇಂದ್ರ ಶೆಟ್ಟಿ, ದಿನಕರ ಶೆಟ್ಟಿ, ಮಂಜಯ್ಯ ಶೆಟ್ಟಿ, ಜಯಂತ ಶೆಟ್ಟಿ, ಕೆ. ಮಂಜಯ್ಯ ಶೆಟ್ಟಿ, ಶಂಕರ ಶೆಟ್ಟಿ, ಸುಜನ ಶೆಟ್ಟಿ, ಗೋವರ್ಧನ ಶೆಟ್ಟಿ, ಅಶೋಕ ಶೆಟ್ಟಿ, ಡಾ| ರಂಜನ್‌ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಸರ್ವೋತ್ತಮ ಶೆಟ್ಟಿ, ಆದರ್ಶ ಶೆಟ್ಟಿ, ಜಯಪ್ರಕಾಶ ಶೆಟ್ಟಿ, ಶಿವರಾಮ ಶೆಟ್ಟಿ, ನಾರಾಯಣ ಶೆಟ್ಟಿ, ನ್ಯಾಯವಾದಿಗಳಾದ ಎಚ್‌. ಆನಂದ ಮಡಿವಾಳ, ಕೆ. ಕುಸುಮಾಕರ ಶೆಟ್ಟಿ, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವಿರಾಜ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next