Advertisement

ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ : ಶತಚಂಡಿಕಾ ಯಾಗ ಸಂಪನ್ನ

02:34 PM Dec 28, 2021 | Team Udayavani |

ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲದಲ್ಲಿ ಲೋಕ ಕಲ್ಯಾಣಾರ್ಥವಾಗಿ ಡಿ.28 ಶತಚಂಡಿಕಾ ಯಾಗವು ಸಕಲ ಧಾರ್ಮಿಕ ವಿಧಿ ವಿಧಾನಗಳು ಶೃಂಗೇರಿ ಶ್ರೀಗಳವರ ಮಾರ್ಗದರ್ಶನದೊಂದಿಗೆ ಶ್ರೀ ಕೆ.ಎಸ್‌.ಲಕ್ಷ್ಮೀನಾರಾಯಣ ಸೋಮಯಾಜಿ ಕಮ್ಮರಡಿ ಹಾಗೂ ಅರ್ಚಕರ ನೇತೃತ್ವದಲ್ಲಿ ಸಂಪನ್ನಗೊಂಡಿತು.

Advertisement

ಈ ಸಂದರ್ಭದಲ್ಲಿ ಕೇರಳ ಪಯ್ಯನ್ನೂರಿನ ಪ್ರಸಿದ್ಧ ಜೋಯಿಸರಾದ ಮಾಧವನ್‌ ಪೊದುವಾಳರು, ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ , ಅನಿತಾ ಶೇರೆಗಾರ, ಪುರುಷೋತ್ತಮ್‌ ಭಟ್‌ ಮುಂಬಯಿ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪ್ರಧಾನ ಅರ್ಚಕ ಅನಂತ ಪುರಾಣಿಕ್‌ , ದೇಗುಲದ ವ್ಯವಸ್ಥಾಪಕ ರಾಜಶೇಖರ ಹೆಗ್ಡೆ , ಗಂಗೊಳ್ಳಿ ಹೊಸಮನೆ ಕುಟುಂಬಸ್ಥರು, ಕೀರ್ತಿಶೇಷ ಗೌರಮ್ಮ ಮತ್ತು ಮಂಜುನಾಥ ಶೇರೆಗಾರ ಕುಟುಂಬಿಕರು ಹಾಗೂ ಅಪಾರ ಭಕ್ತರು ಉಪಸ್ಥಿತರಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next