Advertisement

ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಳಿ ತಿರುಗಾಟದ ಉದ್ಘಾಟನೆ

01:26 PM Dec 06, 2017 | |

ಕಾಸರಗೋಡು: ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಳಿ ಇದರ 14 ನೇ ವರ್ಷದ ತಿರುಗಾಟದ ಉದ್ಘಾಟನೆಯನ್ನು ಕರ್ನಾಟಕದ ಲೋಕಸೇವಾ ಆಯೋಗದ ಅಧ್ಯಕ್ಷರಾದ ಡಾ|ಟಿ.ಶ್ಯಾಮ್‌ ಭಟ್‌ ಅವರು ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಕೇಶವಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿಸಿದರು. 

Advertisement

ಸಮಾರಂಭದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿ, ಯಕ್ಷಗಾನ ಕಲಾವಿದ ಡಾ|ರಮಾನಂದ ಬನಾರಿಯವರು ವಹಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರು ಶುಭಾಶಂಸನೆಗೈದರು. 

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದರೂ ಪ್ರಸಂಗಕರ್ತರೂ ಆದ ಮಧೂರು ವೆಂಕಟಕೃಷ್ಣ ಮತ್ತು ಪೆರಡಂಜಿ ಗೋಪಾಲಕೃಷ್ಣ ಭಟ್‌ ಅವರನ್ನು ಸಮ್ಮಾನಿಸಲಾಯಿತು. 

ವೇಣುಗೋಪಾಲ ಭಟ್‌ ಅವರು ಅಭಿನಂದನಾ ನುಡಿಗಳನ್ನಾಡಿದರು.  ಅಗಲಿದ ಹಿರಿಯ ಯಕ್ಷಗಾನ ಕಲಾವಿದರಾದ ಟಿಪ್ಪಾಣಿ ರಾಮಚಂದ್ರ ಹೆಗ್ಡೆ ಮತ್ತು ಭಾಗವತರಾದ ಕುಬಣೂರು ಶ್ರೀಧರ ರಾವ್‌ ಅವರ ಸಂಸ್ಮರಣೆಯನ್ನು ಪ್ರೊ|ಎಂ.ಎಲ್‌.ಸಾಮಗರು ನೆರವೇರಿಸಿದರು. 

ಶ್ರೀ ಮಠದ ಪ್ರಬಂಧಕ ಹಾಗೂ ಹಿರಿಯ ನ್ಯಾಯವಾದಿಗಳಾದ ಐ.ವಿ.ಭಟ್‌ ಸ್ವಾಗತಿಸಿದರು. ಧಾರ್ಮಿಕ ಮುಂದಾಳು ಕುಂಟಾರು ರವೀಶ ತಂತ್ರಿಯವರು ವಂದಿಸಿದರು. ಶ್ರೀ ಮಠದ ಕಾರ್ಯದರ್ಶಿ ರಾಜೇಂದ್ರ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next