Advertisement
ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಮಾತನಾಡಿದರು. ಕೆ.ಇ.ಚಿದಾನಂದಪ್ಪ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ತಿಮ್ಮಪ್ಪ, ಪಾಲಿಕೆ ಸದಸ್ಯೆ ಚಂದ್ರಕಲಾ, ಮಾಜಿ ಉಪಮೇಯರ್ ಬೆಣಕಲ್ಲು ಬಸವರಾಜ, ಆಶಲತಾ, ಸೋಮಪ್ಪ, ಗೋವಿಂದರಾಜು, ಕೃಷ್ಣಮೂರ್ತಿ, ಪಿ.ಗಾದೆಪ್ಪ, ರಾಯಚೂರಿನ ಸಹಾಯಕ ಸಾರಿಗೆ ಆಯುಕ್ತ ವೆಂಕಟೇಶಪ್ಪ, ಸೋಮರೆಡ್ಡಿ ಹಾಗೂ ಸಮಾಜದ ಎಲ್ಲಾ ಮುಖಂಡರು, ಪದಾಧಿಕಾರಿಗಳು ಇದ್ದರು. ಬಿ.ನಾಗರಾಜ ಸ್ವಾಗತಿಸಿ ವಂದಿಸಿದರು.
ವಿಠ್ಠಲ-ಕೃಷ್ಣ ದೇಗುಲದಲ್ಲಿ ಜನ್ಮಾಷ್ಟಮಿ ಆಚರಣೆಬಳ್ಳಾರಿ: ನಗರದ ರಾಯಲ್ ಕಾಲೋನಿಯಲ್ಲಿರುವ ವಿಠ್ಠಲ-ಕೃಷ್ಣ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಗಡಿಗೆ ಒಡೆಯುವ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಬೆಣ್ಣೆ ತುಂಬಿದ ಗಡಿಗೆ ಒಡೆಯಲು ನಾಮುಂದು, ತಾಮುಂದು ಎಂದು ಪುಟಾಣಿ ಕೃಷ್ಣರು ಪೈಪೋಟಿ ನೀಡುವ ಮೂಲಕ ಸಂಭ್ರಮದಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಿದರು. ಇನ್ನೂ ಜನ್ಮಾಷ್ಟಮಿ ನಿಮಿತ್ತ ದೇಗುಲದಲ್ಲಿ ಬೆಳಿಗ್ಗೆಯಿಂದಲೇ ನೈರ್ಮಲ್ಯ ವಿಸರ್ಜನೆ, ಪಂಚಾಮೃತಾಭಿಷೇಕ, ಪುಷ್ಪಾರ್ಚನೆ, ದೇವರ ನಾಮವನ್ನು ಪಠಿಸುವ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಇಲ್ಲಿರುವ ಶ್ರೀ ಕೃಷ್ಣನ ವಿಗ್ರಹವನ್ನು ಬೆಣ್ಣೆಯಿಂದ ಅಲಂಕಾರ ಮಾಡುವ ಮೂಲಕ ಉಡುಪಿಯ ಕೃಷ್ಣನ ನೆನಪುಸುವಂತೆ ಮಾಡಲಾಗಿತ್ತು. ಅಷ್ಟಮಿ ಪ್ರಯುಕ್ತ ಉಪವಾಸವಿದ್ದ ಕೃಷ್ಣನ ಭಕ್ತರು ಬೆಳಿಗ್ಗೆ ನಗರ ಪ್ರದಕ್ಷಣೆ ಮಾಡಿ ಪಲ್ಲಕ್ಕಿ ಸೇವೆ ಮಾಡಿದರು. ಬಳಿಕ ದೇವಸ್ಥಾನ ಆವರಣದಲ್ಲಿ ಚಿಣ್ಣರು ಬೆಣ್ಣೆ ತುಂಬಿದ ಗಡಿಗೆಯನ್ನು ಒಡೆದು ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದರು. ಇನ್ನೂ ದೇವಸ್ಥಾನದ ಪಕ್ಕದ ವೇದಿಕೆಯಲ್ಲಿ ಇಂದ್ರಾಣಿ ನಾಟ್ಯಕಲಾ ಸಂಘದ ಮಕ್ಕಳು ಸೇರಿದಂತೆ ಸ್ಥಳೀಯ ಮಕ್ಕಳು ಭರತನಾಟ್ಯ, ಕುಚುಪುಡಿ, ಜಾನಪದ, ಮುಂತಾದ ನೃತ್ಯಗಳನ್ನು ಮಾಡಿದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಪ್ರಕಾಶ್ ರಾವ್, ಪ್ರಾಣೇಶ್, ಯಜ್ಞವಲ್ಕಾ ಸೇವಾ ಸಮಿತಿಯ ಸದಸ್ಯರು ವಿಠ್ಠಲ-ಕೃಷ್ಣ ಭಜನಾ ಮಂಡಳಿಯ ಶೋಭಾ, ವೇದಾವತಿ, ಸುನಿತಾ, ಸಹನಾ, ಕವಿತಾ ಸೇರಿದಂತೆ ಇತರರು ಇದ್ದರು. ಶ್ರೀಕೃಷ್ಣ ಭಾವಚಿತ್ರ ಮೆರವಣಿಗೆ ಇದಕ್ಕೂ ಮುನ್ನ ನಗರದ ಮುನಿಸಿಪಲ್ ಕಾಲೇಜು ಮೈದಾನದಿಂದ ನಡೆದ ಶ್ರೀಕೃಷ್ಣ ಜಯಂತಿ ಮೆರವಣಿಗೆಗೆ ಶಾಸಕ ಜಿ.ಸೋಮಶೇಖರ ರೆಡ್ಡಿ ಚಾಲನೆ ನೀಡಿದರು. ನಂತರ ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ಪೇಟೆ ಪೊಲೀಸ್ ಠಾಣೆ, ಜೈನ್ ಮಾರ್ಕೆಟ್, ಎಚ್.ಆರ್.ಗವಿಯಪ್ಪ ವೃತ್ತ ಮುಖಾಂತರ ವೇದಿಕೆ ಸ್ಥಳವಾದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು. ಪಾಲಿಕೆ ಸದಸ್ಯರಾದ ಮಲ್ಲನಗೌಡ, ಶ್ರೀನಿವಾಸ ಮೋತ್ಕರ್ ಇತರರಿದ್ದರು.