Advertisement

ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆ ಬಿಟ್ಟು ಇತರ ಭಾಷೆಗೆ ಮನ್ನಣೆ : ಕಸಾಪ ತೀವ್ರ ಆಕ್ಷೇಪ

05:18 PM Dec 01, 2020 | sudhir |

ಉಡುಪಿ:  ಉಡುಪಿ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಬಿಟ್ಟು ಇತರ ಭಾಷೆಗೆ ಮನ್ನಣೆ ನೀಡಿದ್ದನ್ನು  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ.ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಕ್ಕೆ ಆಧ್ಯತೆ. ನಾಮಫಲಕದಲ್ಲಿ ಮೊದಲು ಕನ್ನಡ ಇರಬೇಕು ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ವಷ್ಟ ಉಲ್ಲಂಘನೆಯಾಗಿದೆ ಇದನ್ನು ಕೂಡಲೇ ಸರಿಪಡಿಸಬೇಕು ಎಂದರು. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಜೊತೆಗೆ ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.

ಸಮಾಜಕ್ಕೆ ಮಾರ್ಗದರ್ಶನ ಮಾಡುವವರೆ ಇಂತಹ ಕುಚೋದ್ಯ ಕೆಲಸಕ್ಕೆ ಕೈ ಹಾಕಿರುವುದು ಕ್ಷಮಿಸಲಾಗದ ಅಪರಾಧ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಸಂಬಂಧಪಟ್ಟವರು ತಕ್ಷಣ ಇದನ್ನು ಸರಿಪಡಿಸಬೇಕು ಇದು ಕನ್ನಡ ಸಾಹಿತ್ಯ ಪರಿಷತ್ ನ ಹಕ್ಕೊತ್ತಾಯವಾಗಿದೆ. ನಾಮಫಲಕದಲ್ಲಿ ಕನ್ನಡ ಭಾಷೆ ತೆಗೆದು ತುಳು ಭಾಷೆ ಹಾಕಿದ್ದು ಸರಿಯಲ್ಲ. ಬೇರೆ ಭಾಷೆಯನ್ನು ಬೆಳೆಸುವಾಗ ಮೊದಲು ಕನ್ನಡವನ್ನೇ ಬಳಸಬೇಕು.

ಇದನ್ನೂ ಓದಿ:ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

ಕನ್ನಡ ಭಾಷೆ ಯನ್ನು ಕೈ ಬಿಟ್ಟು ಬೇರೆ ಭಾಷೆಯನ್ನು ಬಳಸಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.ಮೊದಲು ಕನ್ನಡ. ಆನಂತರ ಇತರೆ ಭಾಷೆ ನಾಮಫಲಕದಲ್ಲಿಇರಲಿ.ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದು ಸಹ ಪರಿಷತ್ ತೀವ್ರ ವಾಗಿ ಖಂಡಿಸುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next