Advertisement

ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ: ಪ್ರತಿಭಾ ಪುರಸ್ಕಾರ

01:50 PM Oct 26, 2017 | |

ಮುಂಬಯಿ: ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಇದರ ವಿಂಶತಿ ವರ್ಷ ಸಾಂಸ್ಕೃತಿಕ ಉತ್ಸವ ಅ. 22ರಂದು ಅಪರಾಹ್ನ  ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಸಂಸ್ಥಾಪಕಾಧ್ಯಕ್ಷ ವಿದ್ವಾನ್‌ ಕೈರಬೆಟ್ಟು ವಿಶ್ವನಾಥ್‌ ಭಟ್‌ ಅವರ ನೇತೃತ್ವದಲ್ಲಿ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಶ್ರೀ ವಿಟuಲಾನುಗ್ರಹ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಏಂಜಲ್‌ ಪ್ರೊಡಕ್ಷನ್‌ ಲಿಮಿಟೆಡ್‌ ಇದರ ಅರವಿಂದ ಕುಮಾರ್‌ ಮತ್ತು ಶ್ರೀ ವಾತ್ಸವ, ಚಿತ್ರನಟಿ ಶ್ರದ್ಧಾ ಸಾಲ್ಯಾನ್‌, ಕಬಡ್ಡಿ ಆಟಗಾರ ರಿಶಾಂಕ್‌ ದೇವಾಡಿಗ, ಪ್ರಸಿದ್ಧ ಭಜರಂಗ್‌ ಭಾಯಿಜಾನ್‌ ಬಾಲ ನಟಿ ಹರ್ಷಾಲಿ ಮಲ್ಹೋತ್ರ, ಬಾಲ ಪ್ರತಿಭೆಗಳಾದ ಪ್ರಣವ್‌ ನವೀನ್‌ ಬಂಗೇರ, ವಿಖ್ಯಾತ್‌ ವಿ. ಭಟ್‌ ಅವರನ್ನು  ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು.

ಬಿಎಸ್‌ಕೆಬಿ ಅಸೋಸಿಯೇಶನ್‌ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮುಂಬಯಿ ಘಟಕದ ಅಧ್ಯಕ್ಷ ಕಡಂದಲೆ ಸುರೇಶ್‌ ಭಂಡಾರಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಸಿದ್ಧ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಾಗವತ, ಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ, ಸಂಗೀತಗಾರ  ಪದ್ಮನಾಭ ಸಸಿಹಿತ್ಲು, ಶ್ರೀ ಕೃಷ್ಣ ವಿಟuಲ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಪೆರ್ಮುದೆ ಅಶೋಕ್‌ ಶೆಟ್ಟಿ, ಕೋಶಾಧಿಕಾರಿ ಅವಿನಾಶ್‌ ಶಾಸಿŒ, ಧರ್ಮ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ವಿರಾರ್‌ ಶಂಕರ್‌ ಬಿ. ಶೆಟ್ಟಿ, ಶಿಕ್ಷಣ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷ ಕಳತ್ತೂರು ವಿಶ್ವನಾಥ ಶೆಟ್ಟಿ, ಸಂಸ್ಕೃತಿ ಸಮೃದ್ಧಿ ಯೋಜನೆಯ ಕಾರ್ಯಾಧ್ಯಕ್ಷೆ ಸುಮಾ ವಿ. ಭಟ್‌, ಉಪಾಧ್ಯಕ್ಷರಾದ ರಮೇಶ್‌ ಡಿ. ಸಾವಂತ್‌, ಹರೀಶ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಶಶಿಧರ ಬಿ. ಶೆಟ್ಟಿ, ಕುಕ್ಕೆಹಳ್ಳಿ ಸದಾನಂದ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಂದಾ ಎಸ್‌. ಉಪಾಧ್ಯಾಯ,ಯುವ ವಿಭಾಗದ ನವೀನ್‌ ಪಡು ಇನ್ನ, ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ, ಕಲಾ ಸಂಘಟಕ ಕರ್ನೂರು ಮೋಹನ್‌ ರೈ, ಅಮೃತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಸುಭಾಷ್‌ ಶಿರಿಯಾ

Advertisement

Udayavani is now on Telegram. Click here to join our channel and stay updated with the latest news.

Next