Advertisement

ಧರ್ಮಸ್ಥಳ: ಸಮವಸರಣ ಪೂಜೆ ;ಲಕ್ಷದೀಪೋತ್ಸವಕ್ಕೆ ತೆರೆ

02:08 AM Dec 06, 2021 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶನಿವಾರ ಸಮವಸರಣ ಪೂಜೆ ನಡೆಯಿತು. ಪಂಚನಮಸ್ಕಾರ ಮಂತ್ರ ಪಠಣ, ಭಜನೆ, ಸ್ತೋತ್ರ ಹಾಗೂ ಪೂಜಾ ಮಂತ್ರ ಪಠಣದೊಂದಿಗೆ ಅಷ್ಟವಿಧಾರ್ಚನೆ ಪೂಜೆ ನಡೆಯಿತು.

Advertisement

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಶ್ರದ್ಧಾ ಅಮಿತ್‌, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ವಿಶೇಷ ಉಪನ್ಯಾಸ
ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿನ ಶಿಕ್ಷಕ ಅಜಿತ್‌ ಕುಮಾರ್‌ ಕೊಕ್ರಾಡಿ ಅನೇಕಾಂತವಾದದ ಬಗ್ಗೆ ವಿಶೇಷ ಉಪನ್ಯಾಸ ನೀಡಿ, ಮನ, ವಚನ ಮತ್ತು ಕಾಯದಿಂದ ಆಚಾರದಲ್ಲಿ ಅಹಿಂಸೆ ಮತ್ತು ವಿಚಾರದಲ್ಲಿ ಅನೇಕಾಂತ ವಾದ ಪಾಲನೆ ಮಾಡಿದರೆ ಆತ್ಮಕಲ್ಯಾಣದೊಂದಿಗೆ ಲೋಕಕಲ್ಯಾಣವೂ ಆಗುತ್ತದೆ. ತನ್ಮೂಲಕ ವಿಶ್ವಶಾಂತಿ ಲಭಿಸುತ್ತದೆ ಎಂದು ಹೇಳಿದರು.

ಪಾಕತಜ್ಞರಾದ ಪೆರಾಡಿಯ ನಾಗರಾಜ ಶೆಟ್ಟಿ ಮತ್ತು ಕನ್ನಡಿಕಟ್ಟೆಯ ಶಶಿಕಾಂತ ಜೈನ್‌ ಅವರನ್ನು ಸಮ್ಮಾನಿ ಸಲಾಯಿತು. ಮಹಾವೀರ ಜೈನ್‌ ಇಚ್ಲಂಪಾಡಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next