Advertisement

ಬೌದ್ಧರು, ಮುಸ್ಲಿಮರ ನಡುವೆ ಹಿಂಸಾಚಾರ; ಲಂಕಾದಲ್ಲಿ ತುರ್ತು ಪರಿಸ್ಥಿತಿ

03:15 PM Mar 06, 2018 | Sharanya Alva |

ಕೊಲೊಂಬೊ: ಶ್ರೀಲಂಕಾದ ಕ್ಯಾಂಡಿಯಲ್ಲಿ ಬೌದ್ಧರು ಮತ್ತು ಮುಸ್ಲಿಂ ಸಮುದಾಯದ ನಡುವೆ ನಡೆದ ತೀವ್ರ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 10 ದಿನಗಳ ಕಾಲ ತುರ್ತುಪರಿಸ್ಥಿತಿ ಘೋಷಿಸಲಾಗಿದೆ ಎಂದು ಶ್ರೀಲಂಕಾ ಸರಕಾರ ಮಂಗಳವಾರ ಘೋಷಿಸಿದೆ.

Advertisement

ಮುಸ್ಲಿಮರು ಬಲವಂತದ ಮತಾಂತರ ಹಾಗೂ ಬೌದ್ಧರ ಪ್ರಾಚೀನ ಸ್ಥಳಗಳನ್ನು ಧ್ವಂಸ ಮಾಡುತ್ತಿರುವುದಾಗಿ ಕೆಲವು ಕಟ್ಟಾ ಬೌದ್ಧ ಸಂಘಗಳು ಆರೋಪಿಸಿದ್ದು, ಈ ವಿಚಾರದಲ್ಲಿಯೇ ಕಳೆದ ಒಂದು ವರ್ಷದಿಂದ ಬೌದ್ಧ ಮತ್ತು ಮುಸ್ಲಿಂ ಸಮುದಾಯದ ನಡುವೆ ಸಂಘರ್ಷಗಳು ನಡೆಯುತ್ತಿತ್ತು.

ಅಲ್ಲದೇ ಮ್ಯಾನ್ಮಾರ್ ನ ರೋಹಿಂಗ್ಯಾ ಮುಸ್ಲಿಮರು ಶ್ರೀಲಂಕಾದಲ್ಲಿ ಠಿಕಾಣಿ ಹೂಡಿರುವುದಕ್ಕೂ ಕೆಲವು ಬೌದ್ಧರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು.

ಹಿಂಸಾಚಾರದ ನೆಲೆಯಲ್ಲಿ ಮಂಗಳವಾರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ದೇಶದ ವಿವಿಧ ಭಾಗದಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ಮಟ್ಟಹಾಕುವ ನಿಟ್ಟಿನಲ್ಲಿ 10 ದಿನಗಳ ಕಾಲ ತುರ್ತು ಪರಿಸ್ಥಿತಿ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ ಎಂದು ವಕ್ತಾರ ದಯಾಸಿರಿ ಜಯಸೇಕರ ಸುದ್ದಿ ಸಂಸ್ಥೆ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next