Advertisement

ವ್ಯಾಪಾರ, ರಕ್ಷಣೆ ಕುರಿತು ಮಾತುಕತೆ; ಇಂದು ಶ್ರೀಲಂಕಾ ಪ್ರಧಾನಿ ರಾಜಪಕ್ಸೆ ಭಾರತಕ್ಕೆ ಭೇಟಿ

10:00 AM Feb 08, 2020 | Nagendra Trasi |

ನವದೆಹಲಿ:ವ್ಯಾಪಾರ, ರಕ್ಷಣೆ ಹಾಗೂ ಸಮುದ್ರ ಸಂಬಂಧಿ ಭದ್ರತಾ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತ ಉನ್ನತ ಸಭೆ ನಡೆಸಲು ಶ್ರೀಲಂಕಾ ಪ್ರಧಾನಿ ಮಹೀಂದಾ ರಾಜಪಕ್ಸೆ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಶ್ರೀಲಂಕಾ ಪ್ರಧಾನಿ ಫೆ.7ರಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಭಾರತಕ್ಕೆ ಆಗಮಿಸಲಿರುವ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ.

2019ರ ನವೆಂಬರ್ ನಲ್ಲಿ ಸಹೋದರ ಗೋಟಬಯಾ ಅವರು ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಂತರ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಮಹೀಂದ ರಾಜಪಕ್ಸೆ ಅವರು ಇಂದು ಸಂಜೆ 5.35ಕ್ಕೆ ನವದೆಹಲಿಗೆ ಆಗಮಿಸಲಿದ್ದಾರೆ. ಬಳಿಕ ಸಚಿವ ಜೈಶಂಕರ್ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next