Advertisement

26ರಂದು ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಭೇಟಿ

11:06 PM Jul 22, 2019 | Lakshmi GovindaRaj |

ಕೊಲ್ಲೂರು: ಶ್ರೀಲಂಕಾ ಪ್ರಧಾನಿ ರಾಣಿಲ್‌ ವಿಕ್ರಮ ಸಿಂಘ ಅವರು ಜು.26 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇವಿಯ ಪರಮ ಭಕ್ತರಾಗಿರುವ ಶ್ರೀಲಂಕಾ ಪ್ರಧಾನಿಯವರು ಶುಕ್ರವಾರ ನಡೆಯಲಿರುವ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಭಾಗವಹಿಸುವರು. ಹೀಗಾಗಿ, ಶುಕ್ರವಾರ ಬೆಳಗ್ಗೆ 9 ಗಂಟೆ ತನಕ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವಿರಲಿದೆ.

Advertisement

ಬಳಿಕ ಶ್ರೀಲಂಕಾ ಪ್ರಧಾನಿಯವರ ನವಚಂಡಿಯಾಗದ ಪೂರ್ಣಹುತಿ ತನಕ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ತನಕ ಕೊಲ್ಲೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಸತಿ ಸಮುಚ್ಚಯವನ್ನು ಸಂಪೂರ್ಣ ಬಂದ್‌ ಮಾಡಲಾಗುವುದು. ವಾಹನ ಸಂಚಾರ ಸಹಿತ ಪಾದಚಾರಿಗಳ ಸಂಚಾರಕ್ಕೆ ಈ ಅವ ಧಿಯಲ್ಲಿ ನಿರ್ಬಂಧವಿರಲಿದೆ. ಭಕ್ತರು ಸಹಕರಿಸಬೇಕು ಎಂದು ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಹಾಲಪ್ಪ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ್‌ ಶೆಟ್ಟಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next