Advertisement

ಶ್ರೀ ಮಹದೇಶ್ವರ ಸ್ವಾಮಿ ರಥೋತ್ಸವ

12:12 PM Nov 12, 2021 | Team Udayavani |

ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಹೊಸಗಾವಿ ಗ್ರಾಮದ ಪುರಾತನ ಪ್ರಸಿದ್ಧ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸ ರಥೋತ್ಸವ ಜರುಗಿತು.

Advertisement

ಮುಂಜಾನೆಯಿಂದಲೇ ಬುಧವಾರ ಬೆಳಗ್ಗೆಯಿಂದಲೇ ಆರಂಭವಾದ ವಿವಿಧ ಪೂಜಾ ವಿಧಿ ವಿಧಾನದ ಬಳಿಕ ಸಂಜೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಅಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದವು.

ಇದನ್ನೂ ಓದಿ:- ತಾಕತ್ತಿದ್ದರೆ ರಫೇಲ್ ಹಗರಣದ ಸಮಗ್ರ ತನಿಖೆ ನಡೆಸಿ: ಕೇಂದ್ರಕ್ಕೆ ಅಲ್ಕಾ ಸವಾಲು

ಬುಧವಾರ ಸಂಜೆ ದೇವಾಲಯದ ಆವರಣದಲ್ಲಿ ಜರುಗಿದ ರಥೋತ್ಸವದಲ್ಲಿ 3 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಭಕ್ತರಿಗೆ ಶ್ರೀ ಮಹದೇಶ್ವರ ಸ್ವಾಮಿ ಟ್ರಸ್ಟ್‌ ವತಿಯಿಂದ ಪ್ರಸಾದ ವಿನಿಯೋಗ ನೆರವೇರಿತು.

Advertisement

Udayavani is now on Telegram. Click here to join our channel and stay updated with the latest news.

Next