ಮುಂಬಯಿ : ಸುಮಾರು 63 ವರ್ಷಗಳಿಂದ ತುಳು- ಕನ್ನಡಿಗರಿಂದ ಆರಾಧಿಸಲ್ಪಡುತ್ತಿರುವ ಗೋರೆಗಾಂವ್ ಫ್ಲೆ$çಓವರ್ ಮುಂಬ ದಿಯ ಇರಾನಿ ಕಾಲನಿಯ ಮಲಾಡ್ ಪೂರ್ವದ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ 64ನೇ ವಾರ್ಷಿಕ ಪೂಜಾ ಮಹೋತ್ಸವವು ಮಾ. 23 ರಂದು ವಿವಿಧ ಧಾರ್ಮಿಕ ಕಾರ್ಯಕ್ರ ಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ವೇದಮೂರ್ತಿ ಕೆ. ಗೋವಿಂದ ಭಟ್ ಅವರ ಮಾರ್ಗದರ್ಶನ ಹಾಗೂ ದೇವಸ್ಥಾನದ ಅರ್ಚಕರಾದ ಸುಧಾಕರ ಎಂ. ಶೆಟ್ಟಿ ಮತ್ತು ಎಸ್. ಯು. ಬಂಗೇರ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿ ಸಿದರು. ಧಾರ್ಮಿಕ ಕಾರ್ಯಕ್ರಮ ವಾಗಿ ಬೆಳಗ್ಗೆಯಿಂದ ಗಣಹೋಮ, ಪೂರ್ವಾಹ್ನ 10.45ನಿಂದ ಅಶ್ವತ್ಥ ಪೂಜೆ, ಮಹಾಪ್ರಸಾದ ವಿತರಣೆ, ಪಲ್ಲಪೂಜೆ, ಮಧ್ಯಾಹ್ನ 12ರಿಂದ ಮಹಾಮಂಗಳಾರತಿ, ಶನಿದೇವರ ಪ್ರತಿಬಿಂಬದ ದರ್ಶನ ನಡೆಯಿತು.
ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಅಪರಾಹ್ನ 2.30ರಿಂದ ಕಲಶ ಪ್ರತಿಷ್ಠೆ ನೆರವೇರಿದ ಬಳಿಕ ದೇವಸ್ಥಾನದ ಗುಡಿಯಿಂದ ಅಶ್ವತ್ಥ ಕಟ್ಟೆಯವರೆಗೆ ಬಲಿಮೂರ್ತಿ ಉತ್ಸವ ಜರಗಿ, ಆನಂತರ ಶನಿದೇವರ ಪ್ರತಿಬಿಂಬವನ್ನು ದೇವಾಲಯದಲ್ಲಿ ವಿಶೇಷವಾಗಿ ಅಲಂಕರಿಸಿದ ಮಂಟಪದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು ಆನಂತರ ಶನಿಗ್ರಂಥ ಪಾರಾಯಣ ಮತ್ತು ಸಮಿತಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ 6ರಿಂದ ವಿಶೇಷ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು. ಸಮಿತಿಯು ಪ್ರಾರಂಭದಿಂದಲೂ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಜೆ ಮಂದಿರದ ವಠಾರದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ಗುರುನಾರಾಯಣ ಯಕ್ಷ ಗಾನ ಕಲಾಮಂಡಳಿಯ ಕಲಾವಿ ದರಿಂದ ಬೇಡರ ಕಣ್ಣಪ್ಪ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಸಮಿತಿಯ ಸದಸ್ಯರ ನೇತೃತ್ವದಲ್ಲಿ ಶಿಸ್ತುಬದ್ಧವಾಗಿ ಜರಗಿದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಬಿ. ದಿವಾಕರ ಡಿ. ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಎಚ್. ಎಸ್. ಕರ್ಕೇರ, ಎಂ. ಎನ್. ಸುವರ್ಣ, ಗೌರವ ಕೋಶಾಧಿಕಾರಿಗಳಾದ ಎಂ. ಜಿ. ಬಂಗೇರ, ಕೆ. ಎನ್. ಸಾಲ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಎಸ್. ಪಿ. ದೇವಾಡಿಗ, ಎಸ್. ಯು. ಬಂಗೇರ, ಕೆ. ಎನ್. ಸಿ. ಸಾಲ್ಯಾನ್, ಎಸ್. ಎ. ಸಾಲ್ಯಾನ್, ಎಂ. ಎನ್. ಕೋಟ್ಯಾನ್, ಪಿ. ಆರ್. ಅಮೀನ್, ಬಿ. ಎಚ್. ಹೆಜ್ಮಾಡಿ, ಜಯಾ ಎಂ. ಬಂಗೇರ, ಅತುಲ್ ಓಜಾØ ಮೊದಲಾದವರು ಸಹಕರಿಸಿದರು.
ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ರಾಜಕೀಯ ಧುರೀಣರು, ದಾನಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಮಾಜ ಸೇವಕರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ತುಳು-ಕನ್ನಡಿಗರು ಸೇರಿದಂತೆ ಅನ್ಯಭಾಷಿಗ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ದಿನಪೂರ್ತಿ ನಡೆದ ಈ ಧಾರ್ಮಿಕ ಪೂಜಾ ಮಹೋತ್ಸವದಲ್ಲಿ ಕಲಶ ಪೂಜೆ, ಪುಷ್ಪಾಲಂಕಾರ ಪೂಜೆ, ಅಲಂ ಕಾರ ಪೂಜೆ, ಸಪ್ತದೀಪಾಲಂಕಾರ ಪೂಜೆ, ಪಂಚ ದೀಪಾಲಂಕಾರ ಪೂಜೆ ಹಾಗೂ ಪ್ರಸಾದ ಪೂಜೆಯು ಭಕ್ತರಿಂದ ಸಮರ್ಪಿಸಲ್ಪಟ್ಟಿತು.
ದೇವಸ್ಥಾನದಲ್ಲಿ ವಿಶೇಷ ದಿನಗಳನ್ನು ಹೊರತುಪಡಿಸಿ ಪ್ರತೀ ದಿನ ಬೆಳಗ್ಗೆ 6.30ರಿಂದ ಬೆಳಗ್ಗೆ 7.30ರವರೆಗೆ ಹಾಗೂ ಸಂಜೆ 7.30ರಿಂದ ರಾತ್ರಿ 8.30ರವರೆಗೆ ವಿಶೇಷ ಆರತಿ ಜರಗುತ್ತಿದ್ದು, ಪ್ರತೀ ಶನಿವಾರ ರಾತ್ರಿ 9.30ರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿವೆೆ. ವಿಶೇಷ ಹಬ್ಬ ಹರಿದಿನಗಳಲ್ಲಿ ಸಮಿತಿಯ ವತಿಯಿಂದ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಂದಿರವು ಈಗಾಗಲೇ ಕಾರಣಿಕ ಕ್ಷೇತ್ರ ಎಂದೇ ಬಿಂಬಿತಗೊಂಡಿದ್ದು, ದಿನಂಪ್ರತಿ ಭಕ್ತಾದಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಮಂದಿರದಲ್ಲಿ ನಡೆಯುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿನಂತಿಸಲಾಯಿತು.
ಚಿತ್ರ-ವರದಿ : ರಮೇಶ್ ಉದ್ಯಾವರ