Advertisement

ನೆರೂಲ್‌ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ: ಶ್ರೀ ವರಮಹಾಲಕ್ಷ್ಮೀ ಪೂಜೆ

01:53 PM Aug 26, 2021 | Team Udayavani |

ನವಿಮುಂಬಯಿ: ನೆರೂಲ್‌ನ ಪ್ರತಿಷ್ಠಿತ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಕಳೆದ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಪುರೋಹಿತರಾದ ದಿನೇಶ್‌ ಉಪ್ಪಾರ್ಣ ಅವರ ಮುಂದಾಳತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ನವಿ ಮುಂಬಯಿ ಪರಿಸರದ ಹೆಚ್ಚಿನ ತುಳು-ಕನ್ನಡಿಗರು ಪಾಲ್ಗೊಂಡಿದ್ದರು. ಎಲ್ಲರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ಮಹಾದೇವಿಯ ಅನುಗ್ರಹಕ್ಕೆ ಪಾತ್ರರಾದರು. ಕೊನೆಯಲ್ಲಿ ಮಂಗಳಾರತಿ, ಪ್ರಸಾದ ವಿತರಣೆ ವಿತರಿಸಲಾಯಿತು. ಭಕ್ತರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕ್ಷೇತ್ರದ ಭಕ್ತರು ಹಾಗೂ ಎಲ್ಲ ಸದಸ್ಯರು ವಿವಿಧ ಸೇವೆಗಳನ್ನಿತ್ತು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಇದನ್ನೂ ಓದಿ:ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಇದೇ ಸಂದರ್ಭದಲ್ಲಿ ಶ್ರೀ ನಾರಾಯಣಗುರು ಬ್ಯಾಂಕ್‌ನಲ್ಲಿ ಇರಿಸ ಲಾಗಿದ್ದ ದಿ| ಕಿಶೋರ್‌ ಕುಮಾರ್‌ ಶೆಟ್ಟಿಯವರ ಮನೆಯ ಕಾಗದಪತ್ರಗಳನ್ನು ಕಿಶೋರ್‌ ಕುಮಾರ್‌ಶೆಟ್ಟಿಯವರ ಪತ್ನಿಗೆ ಹಸ್ತಾಂತರಿಸಲಾಯಿತು.ಸುರೇಶ್‌ ಜಿ. ಶೆಟ್ಟಿಯವರ ಮನೆಯ ಕಾಗದಪತ್ರಗಳನ್ನು ಸುರೇಶ್‌ ಜಿ. ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು.

ಅಂತೆಯೇ ಸಂಸ್ಥೆಯ ಕಾಗದ ಪತ್ರವನ್ನು ಕಾರ್ಯಾಧ್ಯಕ್ಷ ರವಿ ಆರ್‌. ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು. ಕ್ಷೇತ್ರದ ವಿಶ್ವಸ್ತರು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ನೆರೂಲ್‌ ಪರಿಸರದ ಹಲವಾರು ಗಣ್ಯರು, ವಿವಿಧ ಕ್ಷೇತ್ರಗಳ ಹಾಗು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next