Advertisement

ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವ ಸಂಪನ್ನ

10:21 AM Jan 21, 2019 | |

ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಅಗ್ರಹಾರದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀ ಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಗೋಪಾಲಕೃಷ್ಣ ಸ್ವಾಮಿ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಕಲಾಹೋಮ, ಗಣಪತಿ ಹೋಮ, ದುರ್ಗಾಹೋಮ, ರುದ್ರಹೋಮ, ಸಂಹಿತಾ ಪಾರಾಯಣ ಹಾಗೂ ಸ್ವಾಮಿಗೆ ವಿಶೇಷ ಅಭಿಷೇಕ ನಡೆಯಿತು.ನಂತರ ಉತ್ಸವ ಮೂರ್ತಿಯನ್ನು ಅಲಂಕೃತವಾದ ರಥದಲ್ಲಿ ಕುಳ್ಳಿರಿಸಿ ಭಕ್ತದಿಗಳ ಜಯ ಘೋಷದೊಂದಿಗೆ ದೇಗುಲದ ಹೊರ ಆವರಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಥೋತ್ಸವದ ಅಂಗವಾಗಿ ಅಗ್ರಹಾರದಲ್ಲಿ ತಳಿರು, ತೋರಣ ಹಾಗೂ ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು.

Advertisement

ರಾತ್ರಿ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ, ರಂಗಪೂಜೆ, ಮಹಾ ಮಂಗಳಾರತಿ ನಡೆಯಿತು. ಸುತ್ತಲಿನ ಆನೆಗುಂದ, ಹೆಗ್ಗದ್ದೆ, ಕಾವಡಿ, ಬೆಳಂದೂರು, ಕರುವಾನೆ, ಮಿಗಿನಕಲ್ಲು, ಅಡ್ಡಗದ್ದೆ, ಶೃಂಗೇರಿ, ಕಿರಕೋಡಿನ ನೂರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.

ಅರ್ಚಕ ವಸಂತಭಟ್ ನೇತೃತ್ವದಲ್ಲಿ ಸುಬ್ರಹ್ಮಣ್ಯ ಭಟ್, ಕೃಷ್ಣಮೂರ್ತಿ ಭಟ್ ಮತ್ತಿತರ ಋತ್ವಿಜರ ತಂಡ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next