Advertisement

ಎಲ್‌.ಕೆ. ಆಡ್ವಾಣಿ -ಪೇಜಾವರ ಶ್ರೀ ಭೇಟಿ

01:18 AM Oct 13, 2022 | Team Udayavani |

ಉಡುಪಿ: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಾಜಿ ಉಪಪ್ರಧಾನಿ, ಬಿಜೆಪಿಯ ಹಿರಿಯ ಧುರೀಣ ಎಲ್‌.ಕೆ. ಆಡ್ವಾಣಿ ಅವರನ್ನು ಬುಧವಾರ ದಿಲ್ಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿ, ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

Advertisement

ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಆಡ್ವಾಣಿ ಯವರ ಪಾತ್ರವನ್ನು ಶ್ರೀಗಳು ನೆನಪಿಸುವ ಜತೆಗೆ ಆ ಹೋರಾಟದ ಫಲವಾಗಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದರು.

ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ನೀಡಿದ ಸ್ಫೂರ್ತಿಯನ್ನು ಆಡ್ವಾಣಿ ಸ್ಮರಿಸಿದರು. ಶ್ರೀ ಕೃಷ್ಣನ ಗಂಧಪ್ರಸಾದ, ಶಾಲು ಸ್ಮರಣಿಕೆ, ಫಲಮಂತ್ರಾಕ್ಷತೆಯಿತ್ತು ಆಡ್ವಾಣಿಯವರನ್ನು ಶ್ರೀಗಳು ಆಶೀರ್ವದಿಸಿದರು. ಆಡ್ವಾಣಿಯವರ ಪುತ್ರಿ ಪ್ರತಿಭಾ ಆಡ್ವಾಣಿ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next