Advertisement

ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ: ಪೇಜಾವರ ಶ್ರೀ ಪೂಜೆ

12:18 AM Dec 14, 2022 | Team Udayavani |

ದಾವಣಗೆರೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಮಂದಿರಕ್ಕೆ ಸಮರ್ಪಣೆ ಮಾಡಲಿರುವ 15 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆಗೆ ಮಂಗಳವಾರ ಪಿ.ಜೆ. ಬಡಾವಣೆಯಲ್ಲಿನ ಶ್ರೀ ರಾಘವೇಂದ್ರ ಮಠದಲ್ಲಿ ರಾಮಮಂದಿರ ನಿರ್ಮಾಣದ ಟ್ರಸ್ಟಿ, ಉಡುಪಿಯ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪೂಜಾ ಕಾರ್ಯ ನೆರವೇರಿಸಿದರು.

Advertisement

ಜ. 24ರ ಅನಂತರ ದಾವಣಗೆರೆಯಲ್ಲಿ ಬೃಹತ್‌ ಕಾರ್ಯಕ್ರಮ ನಡೆದು ಸ್ವಾಮೀಜಿಯವರ ಮೂಲಕವೇ ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಿತವಾಗಲಿದೆ.

ದಲಿತರ ಮನೆಯಲ್ಲಿ ಪಾದಪೂಜೆ ಸ್ವೀಕರಿಸಿದ ಪೇಜಾವರ ಶ್ರೀ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನಿಟುವಳ್ಳಿಯ ಶಕ್ತಿನಗರದ ಬನಶಂಕರಿ ದೇವಸ್ಥಾನದ ಹತ್ತಿರ ಇರುವ ದಲಿತ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರು ನಿಂಗರಾಜು ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next