Advertisement

Srinagar Airport; ಬಾಂಬ್ ಬೆದರಿಕೆಯ ನಂತರ ಒಂದು ಗಂಟೆ ಕಾಲ ಕಾರ್ಯಾಚರಣೆ ಸ್ಥಗಿತ

05:32 PM May 31, 2024 | Team Udayavani |

ಶ್ರೀನಗರ : ಕಾಶ್ಮೀರದ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಬಂದ ನಂತರ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಮಾನಗಳ ಕಾರ್ಯಾಚರಣೆಯನ್ನು ಒಂದು ಗಂಟೆಗಳ ಕಾಲ ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ಹೊಸದಿಲ್ಲಿಯಿಂದ ಬಂದ ಏರ್ ವಿಸ್ತಾರಾ ವಿಮಾನದಲ್ಲಿ ಬಾಂಬ್ ಇರುವ ಬೆದರಿಕೆ ಕರೆ ಸ್ವೀಕರಿಸಿದ ಬೆನ್ನಲ್ಲೇ ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸೇರಿದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದರು.

178 ಪ್ರಯಾಣಿಕರಿದ್ದ ವಿಮಾನದ ಬಗ್ಗೆ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಲಾದ್ದು, ವಿಮಾನ ಇಳಿದ ತತ್ ಕ್ಷಣ, ಅದನ್ನು ಐಸೋಲೇಶನ್ ಬೇ ಕಡೆಗೆ ತಿರುಗಿಸಲಾಯಿತು ಮತ್ತು ಪ್ರಯಾಣಿಕರು ಮತ್ತು ಸಿಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next