Advertisement

ಗಣರಾಜ್ಯೋತ್ಸವ ದಿನ ಭಾರೀ ದಾಳಿಗೆ ಹೊಂಚು; ಜೈಶ್ ಸಂಚು ವಿಫಲಗೊಳಿಸಿದ ಶ್ರೀನಗರ ಪೊಲೀಸರು

09:55 AM Jan 17, 2020 | Nagendra Trasi |

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯಂದು ಭಾರೀ ಭಯೋತ್ಪಾದಕ ದಾಳಿ ನಡೆಸಲು ಸಿದ್ಧತೆ ನಡೆಸಿದ್ದ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಸಂಚನ್ನು ವಿಫಲಗೊಳಿಸಿರುವುದಾಗಿ ಶ್ರೀನಗರ್ ಪೊಲೀಸರು ಗುರುವಾರ ತಿಳಿಸಿದ್ದಾರೆ.

Advertisement

ಸಂಚು ನಡೆಸಲು ಉದ್ದೇಶಿಸಿದ್ದ ಶಂಕಿತ ಐವರು ಉಗ್ರರನ್ನು ಬಂಧಿಸಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ಶಂಕಿತರನ್ನು ಎಜಾಝ್ ಅಹ್ಮದ್ ಶೇಕ್, ಉಮರ್ ಹಮೀದ್ ಶೇಕ್, ಇಮ್ತಿಯಾಜ್ ಅಹ್ಮದ್ ಚಿಕ್ಲಾ, ಸಾಹಿಲ್ ಫಾರೂಖ್ ಗೋಜ್ರಿ ಮತ್ತು ನಾಸೀರ್ ಅಹ್ಮದ್ ಮೀರ್ ಎಂದು ಗುರುತಿಸಲಾಗಿದೆ. ಇವರೆಲ್ಲಾ ಹಝ್ರತ್ ಬಾಲ್ ನಿವಾಸಿಗಳು ಎಂದು ವರದಿ ವಿವರಿಸಿದೆ.

ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿ ನಡೆಸಿತ್ತು. ಪುಲ್ವಾಮಾ ಟೆರರ್ ಅಟ್ಯಾಕ್ ಹೊಣೆ ಕೂಡಾ ಜೈಶ್ ಎ ಮೊಹಮ್ಮದ್ ಸಂಘಟನೆ ಹೊತ್ತುಕೊಂಡಿತ್ತು. ಜಮ್ಮು-ಕಾಶ್ಮೀರದಲ್ಲಿ ಕಳೆದ ವರ್ಷ ಫೆಬ್ರುವರಿಯಲ್ಲಿ ನಡೆಸಿದ ದಾಳಿಯಲ್ಲಿ 40 ಭಾರತೀಯ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next