Advertisement

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

11:26 PM Aug 15, 2022 | Team Udayavani |

ಶ್ರೀನಗರ: ಇಡೀ ದೇಶವೇ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ಕಣಿವೆಯಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

Advertisement

ಸೋಮವಾರ ಶ್ರೀನಗರದ ಕಾಶ್ಮೀರ ಪೊಲೀಸ್‌ ನಿಯಂತ್ರಣ ಕೊಠಡಿಯ ಮೇಲೆ ಭಯೋತ್ಪಾದಕರು ಗ್ರೆನೇಡ್‌ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಪೊಲೀಸ್‌ ಸಿಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಇದು ಒಂದೇ ಗಂಟೆಯ ಅವಧಿಯಲ್ಲಿ ನಡೆದ ಎರಡನೇ ಗ್ರೆನೇಡ್‌ ದಾಳಿ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ, ಬದ್ಗಾಂನ ಗೋಪಾಲ್‌ಪೋರಾ ಚಡೂರಾ ಪ್ರದೇಶದಲ್ಲಿ ಉಗ್ರರು ಗ್ರೆನೇಡ್‌ ಎಸೆದ ಕಾರಣ, ಕರಣ್‌ ಕುಮಾರ್‌ ಸಿಂಗ್‌ ಎಂಬ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.

ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next