Advertisement

ಭಾರೀ ಮಳೆ: ಶೃಂಗೇರಿ-ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ : ಹಲವೆಡೆ ಶಾಲೆಗಳಿಗೆ ರಜೆ

10:25 AM Jul 15, 2022 | Team Udayavani |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯ ಹೆದ್ದಾರಿ ರಸ್ತೆ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ನಡೆದಿದೆ.

Advertisement

ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು, ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

‌ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಮೂಡಿಗೆರೆ, ಶೃಂಗೇರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬಿ.ಇ.ಓ. ರಜೆ ಘೋಷಣೆ ಮಾಡಿದ್ದಾರೆ.

ಮೂಡಿಗೆರೆ ತಾಲೂಕು ಬಿಳ್ಳೂರು ಸಮೀಪ ಮರ ಕುಸಿದು ಬಿದ್ದ ಪರಿಣಾಮ ಕಾಲೇಜುಗಳಿಗೆ ಬರಲಾರದೇ ವಿದ್ಯಾರ್ಥಿಗಳು ಪರದಾಡಿ ದ ಘಟನೆ ನಡೆದಿದೆ.

Advertisement

ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಭಾರೀ ಮಳೆ. ಮೂಡಿಗೆರೆ ತಾಲೂಕಿನ ದೇವರ ಮನೆಯಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 350 ಮಿಲಿ ಮೀಟರ್ ಮಳೆ. ಬೈದುವಳ್ಳಿ ಗ್ರಾಮದಲ್ಲಿ ರಸ್ತೆ ಮೇಲೆ ನುಗ್ಗುತ್ತಿರುವ ನೀರು. ಕಳಸ ತಾಲೂಕಿನ ಬಲಿಗೆ ಬಳಿ ಭೂಕುಸಿತ ರಸ್ತೆಯತ್ತ ಬಂದು ಬೀಳುತ್ತಿರುವ ಬೃಹತ್ ಬಂಡೆಗಳು. ಹೊರನಾಡು-ಬಲಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಭೂಕುಸಿತ ಉಂಟಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next