Advertisement

ಕೋವಿಡ್ ನಿಯಂತ್ರಣಕ್ಕೆ ಪ್ರಾರ್ಥನೆ

04:55 PM May 16, 2020 | Naveen |

ಶೃಂಗೇರಿ: ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಕಿಸಾನ್‌ ಕಾಂಗ್ರೆಸ್‌ ವತಿಯಿಂದ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ದೇವಾಸ್ಥಾನದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಶುಕ್ರವಾರ ಪ್ರಾರ್ಥಿಸಲಾಯಿತು ಎಂದು ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸಚಿನ್‌ ಮೀಗಾ ಹೇಳಿದರು.

Advertisement

ಕಿಗ್ಗಾದಲ್ಲಿ ಶ್ರೀ ಶಾಂತಾಸಮೇತ ಋಷ್ಯಶೃಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ 101 ತೆಂಗಿನಕಾಯಿ ಒಡೆದು ಕೋವಿಡ್ ನಿಯಂತ್ರಣಕ್ಕೆ ಬರಲು ಮತ್ತು ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥಿಸಲಾಗಿದೆ ಎಂದರು. ಅರ್ಚಕರಾದ ಶಿವರಾಂಭಟ್‌, ವಿಶ್ವನಾಥಭಟ್‌ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಸತ್ಯನಾರಾಯಣ, ದೋಣೂರು ಚಂದ್ರಶೇಖರ್‌, ಟಿ.ಕೆ. ಗೋಪಾಲನಾಯ್ಕ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next