Advertisement

Ram Mandir; ಶೃಂಗೇರಿ ಶ್ರೀಗಳು ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ: ಸ್ಪಷ್ಟನೆ

06:01 PM Jan 18, 2024 | |

ಚಿಕ್ಕಮಗಳೂರು: ಶೃಂಗೇರಿ ಶ್ರೀ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆಂದು ಖಾಸಗಿ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಶ್ರೀಮಠದಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ.

Advertisement

ಅಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ತೆರಳುತ್ತಿಲ್ಲ. ಸ್ವಾಮೀಜಿಯವರ ಹಾಗೂ ಮಠದ ಪ್ರತಿನಿಧಿಯಾಗಿ ಶ್ರೀಮಠದ ಆಡಳಿತಾಧಿಕಾರಿ ವಿ.ಆರ್. ಗೌರಿ ಶಂಕರ್ ಅವರು ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು, ಸ್ವಾಮೀಜಿ ಅವರು ಶ್ರೀರಾಮನ ಶ್ಲೋಕ ಪಠಿಸಿ ಶ್ರೀರಾಮ ಅನುಗ್ರಹ ದೊರೆಯುತ್ತದೆ ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next