Advertisement

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

06:05 PM Sep 30, 2024 | Team Udayavani |

ಚಿಕ್ಕಮಗಳೂರು: ಎಸ್‌ಎಸ್ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

Advertisement

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಸ್.ಕೆ.ಧ್ರುವ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಶೃಂಗೇರಿ ಪಟ್ಟಣದ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಧ್ರುವ, ಸೋಮವಾರ ಮಧ್ಯಾಹ್ನ 11:30 ಸುಮಾರಿಗೆ ತಾನು ತಂಗಿದ್ದ ಬಾಲಕರ ಪಿ.ಜಿ.ಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೋಮವಾರ (ಸೆ.30) ಶಾಲೆಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯಿದ್ದು, ಆದರೆ ಧ್ರುವ ಗೈರು ಹಾಜರಾಗಿದ್ದಾನೆ. ಗೈರು ಹಾಜರಾದ ಕಾರಣ ಶಾಲೆಯಿಂದ ಧ್ರುವನ ಪೋಷಕರಿಗೆ ಕರೆ ಮಾಡಿದ್ದಾರೆ. ನಂತರ ಪೋಷಕರು ಧ್ರುವ ಉಳಿದಿರುವ ಬಾಲಕರ ಪಿಜಿಯ ಮಾಲೀಕರಿಗೆ ಕರೆ ಮಾಡಿದ್ದಾರೆ.

ಪಿಜಿಯ ಮಾಲೀಕರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next