Advertisement

ವಿದ್ಯಾರಣ್ಯಪುರ ಗ್ರಾಪಂನ ನೂತನ ಮಹಡಿ ಕಟ್ಟಡ ಉದ್ಘಾಟನೆ

03:33 PM Jun 07, 2020 | Naveen |

ಶೃಂಗೇರಿ: ಗ್ರಾಪಂ ಕಟ್ಟಡದೊಂದಿಗೆ ಶಾಶ್ವತ ಆದಾಯ ತಂದುಕೊಡುವ ಮಹಡಿ ನಿರ್ಮಿಸಿ, ಸಾರ್ವಜನಿಕರಿಗೂ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

Advertisement

ಪಟ್ಟಣದ ಹೊರವಲಯದ ವಿದ್ಯಾರಣ್ಯಪುರ ಗ್ರಾಪಂನ ಮೊದಲ ಮಹಡಿಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನಲ್ಲಿ ಆರ್‌ಸಿಸಿ ಕಟ್ಟಡ ಸೋರಿಕೆಯಾಗುವುದು ಸಾಮಾನ್ಯವಾಗಿದೆ. ಮೊದಲ ಮಹಡಿ ನಿರ್ಮಿಸಿ, ಸೋರಿಕೆಯನ್ನು ತಪ್ಪಿಸಿದಂತಾಗಿದೆ. ಕಟ್ಟಡವು ವಿಶಾಲವಾಗಿದ್ದು, ಕಚೇರಿ ಉಪಯೋಗಕ್ಕೆ ಅನುಕೂಲವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷ ರಾಜೇಶ್‌ ಶೆಟ್ಟಿ ಮಾತನಾಡಿ, ಗ್ರಾಪಂ ಸ್ವಂತ ನಿಧಿ  13 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ಮೊದಲ ಮಹಡಿ ನಿರ್ಮಿಸಲಾಗಿದೆ. ಕಟ್ಟಡದ ಉದ್ಘಾಟನೆಯನ್ನು ಅದ್ಧೂರಿಯಾಗಿ ನಡೆಸಲು ಉದ್ದೇಶಿಸಲಾಗಿತ್ತಾದರೂ, ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳಗೊಳಿಸಲಾಗಿದೆ. ಗ್ರಾಪಂ ಸದಸ್ಯರ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಿಸಲಾಗಿದೆ ಎಂದರು. ತಾಪಂ ಸದಸ್ಯೆ ಶಿಲ್ಪಾ ಮಂಜುನಾಥ್‌, ಇಒ ಸುದೀಪ್‌, ಗ್ರಾಪಂ ಸದಸ್ಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಪೇಂದ್ರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next