Advertisement

ದಿಗ್ವಿಜಯ್ ಗೆ 10 ಕೋಟಿ ಕೊಟ್ಟು ಪ್ರಮೋದ್ ಮಂತ್ರಿಯಾಗಿದ್ದು; ಪ್ರಸಾದ್

01:17 PM Mar 25, 2017 | Team Udayavani |

ಮೈಸೂರು: ಕಾಂಗ್ರೆಸ್ ಮುಖಂಡ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕೋಟ್ಯಂತರ ರೂಪಾಯಿ ಲಂಚ ನೀಡಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ ಎಂದು ನಂಜನಗೂಡು ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗಂಭೀರವಾಗಿ ಆರೋಪಿಸಿದ್ದಾರೆ.

Advertisement

ಉಡುಪಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆದ್ದಿದ್ದ ಪ್ರಮೋದ್ ಮಧ್ವರಾಜ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಗೆ 10 ಕೋಟಿ ರೂಪಾಯಿ ಲಂಚ ನೀಡಿ ಕ್ಯಾಬಿನೆಟ್ ಮಂತ್ರಿಯಾಗಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ನಂಜನಗೂಡು ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಅವರು, ಪ್ರಮೋದ್ ಮಧ್ವರಾಜ್ 10 ಕೋಟಿ ಕೊಟ್ಟು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಇಂತಹ ದಯನೀಯ ಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಚಿವಗಿರಿ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂಜನಗೂಡು ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಅಖಾಡಕ್ಕಿಳಿಯುವ ಮೂಲಕ ಸಿಎಂಗೆ ಸೆಡ್ಡು ಹೊಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next