Advertisement

ಸ್ವಪಕ್ಷೀಯರ ವಿರುದ್ಧವೇ ಶ್ರೀನಿವಾಸಪ್ರಸಾದ್‌ ಕೆಂಡಾಮಂಡಲ

09:00 AM Dec 31, 2017 | |

ಮೈಸೂರು: ದೇಶದ ಸಂವಿಧಾನವನ್ನು ಅವಹೇಳನ ಮಾಡುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಗೋ.ಮಧುಸೂದನ್‌ ಅವರು ಧಾರ್ಮಿಕ ಮತಾಂಧರು. ಪ್ರಧಾನಿ ನರೇಂದ್ರ ಮೋದಿ ಅವರು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್‌ ಆಗ್ರಹಿಸಿದ್ದಾರೆ. 

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರೇ ಸಂವಿಧಾನವನ್ನು ದೇಶದ ಶ್ರೇಷ್ಠ ಗ್ರಂಥವೆಂದು ಒಪ್ಪಿದ್ದಾರೆ. ತಾವು ಪ್ರಧಾನಿಯಾಗಬೇಕಾದರೆ ಸಂವಿಧಾನವೇ ಕಾರಣವೆಂದು ಹೇಳಿದ್ದಾರೆ. ಹೀಗಿದ್ದರೂ ಬಿಜೆಪಿಯ ಕೆಲವು ನಾಯಕರು ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದು, ಮೋದಿಗೆ ಅವಮಾನ ಮಾಡಿದ್ದಾರೆ. 

ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸಿದ್ದು ಸೋಲಿಸೋದೇ ನನ್ನ ಗುರಿ: “ಮುಂಬರುವ ಚುನಾವಣೆಯಲ್ಲಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ಆದರೆ, ತೊಡೆ ತಟ್ಟಿಕೊಂಡು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನನ್ನ ಏಕೈಕ ಗುರಿ. ಅದಕ್ಕೆ ತಕ್ಕಂತೆ ಹೋರಾಟ ಮಾಡುತ್ತೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next