Advertisement

ಬಿಜೆಪಿ ವಿರುದ್ದ ಶ್ರೀರಾಮ ಸೇನೆ ಆಕ್ರೋಶ: ಶೆಟ್ಟರ್‌ ನಿವಾಸದೆದುರು ಪ್ರತಿಭಟನೆ

01:10 PM Jun 08, 2022 | Team Udayavani |

ಹುಬ್ಬಳ್ಳಿ: ಅಜಾನ್ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ ಎಂದು ವಿರೋಧಿಸಿ ಶ್ರೀರಾಮ ಸೇನೆ ವತಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

Advertisement

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಅಜಾನ್ ನಿಂದಾಗಿ ಶಬ್ದ ಮಾಲಿನ್ಯವಾಗುತ್ತಿದೆ. ಈ ಕುರಿತು ಸುಪ್ರಿಂ ಕೋರ್ಟ್ ಆದೇಶ ನೀಡಿದ್ದರು ಕ್ರಮ ಕೈಗೊಳ್ಳುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಇದನ್ನೂ ಓದಿ:ಆದಷ್ಟು ಬೇಗ ಪಠ್ಯ ಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ನಾಗೇಶ್

ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಹಿಂದುತ್ವದ ಕೆಲಸವನ್ನು ಬಿಜೆಪಿ ಶಾಸಕರು ಮರೆತಿದ್ದಾರೆ‌. ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಬಿಜೆಪಿಯ ಎಲ್ಲಾ ಶಾಸಕರು ಸರಕಾರದ ಮೇಲೆ ಒತ್ತಡ ಹೇರಬೇಕು. ಇದನ್ನು ಕಾರ್ಯಗತಗೊಳಿಸುವುದು ಬಿಜೆಪಿಯ ಪ್ರತಿಯೊಬ್ಬ ಶಾಸಕರ ಕರ್ತವ್ಯವಾಗಿದೆ. ಸುಪ್ರಿಂ ಆದೇಶ ನೆನಪಿಸುವ ನಿಟ್ಟಿನಲ್ಲಿ ಹೋರಾಟ ಹಮ್ಮಿಕೊಂಡಿದ್ದು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next