Advertisement

Sriramulu “ಬಳ್ಳಾರಿ, ಕಲ್ಯಾಣ ಕರ್ನಾಟಕ ಭಾಗದಿಂದಲೂ ಹೋರಾಟ’

12:29 AM Jul 29, 2024 | Team Udayavani |

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರಕಾರವು ಶತಮಾನದ ದೊಡ್ಡ ಭ್ರಷ್ಟಾಚಾರ ಹಗರಣದಲ್ಲಿ ಪಾಲ್ಗೊಂಡಿದೆ. ಈ ಸಂಬಂಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ. ಅಲ್ಲದೆ, ಬಳ್ಳಾರಿ ಮತ್ತು ಕಲ್ಯಾಣ ಕರ್ನಾಟಕದಿಂದಲೂ ನಮ್ಮ ಹೋರಾಟ ನಡೆಯಲಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಬೆಂಗಳೂರು- ಮೈಸೂರು ನಡುವೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಳ್ಳಾರಿಯಿಂದ, ಕಲ್ಯಾಣ ಕರ್ನಾಟಕ ಭಾಗದಿಂದ ಹೋರಾಟ ನಡೆಸುವ ಕುರಿತು ಚಿಂತನೆ ನಡೆದಿದೆ ಎಂದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣಗಳ ವಿರುದ್ಧ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸದನದ ಒಳಗೆ ಮತ್ತು ಹೊರಗೆ ಗಟ್ಟಿಯಾಗಿ ಹೋರಾಟ ರೂಪಿಸಿ¨ªಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆದ ಹಣದ ಅವ್ಯವಹಾರದ ಸಂಬಂಧ ಎಲ್ಲ ಶಾಸಕರು ಸೇರಿ ಗಟ್ಟಿ ಧ್ವನಿಯಿಂದ ಪ್ರಶ್ನಿಸಿ¨ªಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಎದುರಿಸುವ ಕೆಲಸ ಆಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next