Advertisement

ಡಿಕೆಶಿ, ಸಿದ್ದರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

06:10 PM Nov 30, 2021 | Team Udayavani |

ಚಿತ್ರದುರ್ಗ: ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಭಂಡಾಸುರ, ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 400 ಲೋಕಸಭೆ ಸದಸ್ಯರಿದ್ದ ಕಾಂಗ್ರೆಸ್ ಈಗ 50ಕ್ಕೆ ತಲುಪಿದೆ. ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಭಂಡಾಸುರ ಡಿಕೆಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಹೀಯಾಳಿಸಿ ದೊಡ್ಡವಾರಾಗಬಹುದೆಂದು ಭಾವಿಸಿದ್ದಾರೆ. ಬಂಡಾಸುರ, ಮಂಡಾಸುರರು ದೊಡ್ಡ ದೊಡ್ಡ ಮಾತು ಆಡುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಬಿಟ್ ಕಾಯಿನ್ ಬಗ್ಗೆ ಬಂಡಾಸುರ, ಮಂಡಾಸುರರ ಬಳಿ ದಾಖಲೆ ಇಲ್ಲ. ಬುಟ್ಟಿಯಲ್ಲಿ ಹಾವಿದೆ ಎಂದು ಬಿಟ್ ಕಾಯಿನ್ ಬಗ್ಗೆ ಮಾತಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಮುರುಗೇಶ್ ನಿರಾಣಿ ಸಿಎಂ ಆಗುತ್ತಾರೆಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಮಾತನಾಡಿದ ಸಚಿವರು, ಈ ಬಗ್ಗೆ ನಾನು ಮಾತನಾಡುವುದಿಲ್ಲ. ಹೈಕಮಾಂಡ್ ತೀರ್ಮಾನಿಸುತ್ತದೆ. ಬಿಜೆಪಿ ಪಕ್ಷದಲ್ಲಿ ಯಾವುದೇ ಕಚ್ಚಾಟ ಇಲ್ಲ, ಒಗ್ಗಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿ ಕಚ್ಚಾಟ ಇದೆ ಎಂದ ಹೇಳಿದರು.

Advertisement

ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಹರಡುವ ಭೀತಿ ವಿಚಾರಕ್ಕೆ ಮಾತನಾಡಿದ ಅವರು, ಇನ್ನು ಮುಂದೆ ಜೀವನದಲ್ಲಿ ಅನೇಕ ಖಾಯಿಲೆ ಬರಬಹುದು. ಒಮಿಕ್ರಾನ್ ಅಥವಾ ಬೇರೆ ಯಾವುದೇ ಖಾಯಿಲೆ ಬರಬಹುದು. ಮ್ಯಾನ್ ಮೇಡೆಡ್ ಅಥವಾ ನ್ಯಾಚುರಲ್ ವೈರಸ್ ಇರಬಹುದು. ಈ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಸರ್ಕಾರದ ನಿಯಮಗಳನ್ನು ಜನರು ಜಾಗೃತಿಯಿಂದ ಪಾಲಿಸಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next