Advertisement

Srirangapatna: ಕಲ್ಲಡ್ಕ ಪ್ರಭಾಕರ್‌ ಭಟ್ಟರಿಗೆ ಜಾಮೀನು ಮಂಜೂರು

11:43 PM Jan 17, 2024 | Team Udayavani |

ಶ್ರೀರಂಗಪಟ್ಟಣ: ಡಿಸೆಂಬರ್‌ 24ರಂದು ಹನುಮ ಸಂಕೀರ್ತನ ಯಾತ್ರೆ ಭಾಷಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.

Advertisement

ಹನುಮ ಸಂಕೀರ್ತನ ಯಾತ್ರೆಯಲ್ಲಿ ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಪ್ರಚೋದನಕಾರಿ ಭಾಷಣ ಮಾಡಿ ದ್ದಾರೆಂದು ಭಟ್ಟರ ವಿರುದ್ಧ ಮಹಿಳಾ ಹೋರಾಟಗಾರ್ತಿ ಹುಣಸೂರಿನ ನಜ್ಮಾ ನಜೀರ್‌ ಅವರು ಚಿಕ್ಕನೇರಳೆ ಶ್ರೀರಂಗಪಟ್ಟಣ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಕಲ್ಲಡ್ಕ ಪ್ರಭಾಕರ ಭಟ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟ್‌ ತೆರೆಯುವಂತೆ ಅವರು ದೂರಿನಲ್ಲಿ ಒತ್ತಾಯಿಸಿದ್ದರು.

ಬುಧವಾರ ನ್ಯಾಯಾಧೀಶರು ಅರ್ಜಿಯನ್ನು ವಿಚಾರಣೆ ನಡೆಸಿ, ಷರತ್ತುಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದ್ದಾರೆ. ಪ್ರಭಾಕರ್‌ ಭಟ್‌ ಪರ ಚಂದ್ರೇ ಗೌಡ ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next