Advertisement

ಶ್ರೀರಂಗಪಟ್ಟಣ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ  

01:11 PM Feb 06, 2022 | Team Udayavani |

ಶ್ರೀರಂಗಪಟ್ಟಣ: ನಾಲ್ಕು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿರುವ ಘಟನೆ ಕೆ.ಆರ್. ಸಾಗರ ಗ್ರಾಮದ ಬಜಾರ್ ಲೈನ್ ನಲ್ಲಿ ನಡೆದಿದೆ.

Advertisement

ಲಕ್ಷ್ಮೀ (26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ (8)ಕೊಲೆಯಾದ ದುರ್ದೈವಿಗಳು.

ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯದ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರೆದಿದ್ದು, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಸ್ಥಳದಲ್ಲಿ ತಪಾಸಣೆ ನಡೆಸಿದ್ದಾರೆ.  ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕೃತ್ಯ ಬಯಲಾಗುತ್ತಿದ್ದಂತೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next