Advertisement

ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ, ಕಾರಣ ನಿಗೂಢ

01:18 PM Mar 04, 2022 | Team Udayavani |

ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಕಾರೇಕುರ ಗ್ರಾಮದ ಬಳಿ ನಡೆದಿದೆ.

Advertisement

ಕಾರೇಕುರ ಗ್ರಾಮದ ಸಾಗರ್(26) ಮೃತ ಯುವಕ ಎನ್ನಲಾಗಿದೆ. ಕಳೆದ ದಿನಗಳ ಹಿಂದೆ ನಡೆದ ಕೆಆರ್ ಎಸ್ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿರುವುದು ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ.

ಗ್ರಾಮದ ಸಮೀಪದ ಜಮೀನಿನ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಯುವಕನ ರಕ್ತಸಿಕ್ತ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : 28 ರ ಹರೆಯದ ಆರ್ ಪ್ರಿಯಾ ಚೆನ್ನೈನ ಅತ್ಯಂತ ಕಿರಿಯ ಮೇಯರ್

ಹತ್ಯೆಗೈದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸ್ತಿದ್ದು, ಸ್ಥಳದಲ್ಲಿ ಸಾಕ್ಷಿಗಳ ಸಂಗ್ರಹಕ್ಕೆ ಮುಂದಾಗಿದ್ದು ಸ್ಥಳೀಯರಿಂದ ಈ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ.

Advertisement

ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next