Advertisement

ಶ್ರೀವಿದ್ಯಾ ಕೊಡಗಿನ ನೂತನ ಜಿಲ್ಲಾಧಿಕಾರಿ

01:00 PM Dec 14, 2017 | Harsha Rao |

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಶ್ರೀವಿದ್ಯಾ ಅವರನ್ನು ನೇಮಿಸಲಾಗಿದೆ.

Advertisement

ಡಾ| ಡಿ’ಸೋಜಾ ಕೆಲವು ದಿನಗಳ ಹಿಂದಷ್ಟೇ ಭೂದಾಖಲೆಯ ಆದೇಶವೊಂದಕ್ಕೆ ಸಂಬಂಧಿಸಿ ಕೋರ್ಟಿಂದ ತರಾಟೆಗೆ ಒಳಗಾಗಿದ್ದರು. ಪ್ರಸ್ತುತ ಅವರನ್ನು ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀವಿದ್ಯಾ ಅವರನ್ನು ಕೊಡಗು ಜಿಲ್ಲೆಗೆ ವರ್ಗಾಯಿಸಲಾಗಿದೆ. ಶ್ರೀವಿದ್ಯಾ 2010ರ ಐಎಎಸ್‌ ಕೇಡರ್‌ನ ಅಧಿಕಾರಿಯಾಗಿದ್ದು, ಈ ಹಿಂದೆ ಕೊಡಗು ಜಿ.ಪಂ.ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next