Advertisement

ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ಎಸ್‌ಆರ್‌ಎನ್‌ ಮೆಹತಾ ಸಾಧನೆ

07:18 AM Jan 15, 2019 | |

ಕಲಬುರಗಿ: ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ನಗರದ ಎಸ್‌.ಆರ್‌. ಎನ್‌. ಮೆಹತಾ ಶಾಲೆ ವಿದ್ಯಾರ್ಥಿಗಳು ಸಾರಿಗೆ ಮತ್ತು ಸಂಹವನ ಹಾಗೂ ತ್ಯಾಜ್ಯ ನಿರ್ವಹಣಾ ವಿಷಯ ಮಾದರಿಯಲ್ಲಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

Advertisement

ಉರ್ದು ಮತ್ತು ಇತರ ಅಲ್ಪಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ಹಾಗೂ ಕೇಂದ್ರ ಸರ್ಕಾರ ವತಿಯಿಂದ ಆಯೋಜಿಸಲಾಗಿದ್ದ ವಿಜ್ಞಾನ ಮೇಳದಲ್ಲಿ ಶಾಲೆ ವಿದ್ಯಾರ್ಥಿಗಳಾದ ಭಾರತಿ ಬಿ.ಎಂ, ಕೃತಿಕಾ ಜೆ.ಎಂ, ಚೈತ್ರಾ ವಿ.ಎಂ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆ ವಿಜ್ಞಾನ ಶಿಕ್ಷಕಿಯರಾದ ಸುಮಯ್ನಾಖಾನ್‌ ಮತ್ತು ದೀಪಮಾಲಾ ಸಿಂಗ್‌ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ದಕ್ಷಿಣ ಭಾರತದ 6 ರಾಜ್ಯಗಳಿಂದ ಆಗಮಿಸಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯೊಂದಿಗೆ ಸೆಣಸಾಡಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದಿದ್ದಾರೆ ಎಂದು ಶಾಲೆ ಪ್ರಾಚಾರ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರಾದ ಚಕೋರ ಮೆಹತಾ, ಉಪ ಪ್ರಾಚಾರ್ಯರಾದ ಪ್ರೀತಿ ಮೆಹತಾ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next