Advertisement

Mangaluru ಪಕ್ಷದ ನಾಯಕರಿಗೆ ತಿಳಿಸದೆ ನಾಮಪತ್ರ ಹಿಂಪಡೆದ ಜೆಡಿಎಸ್‌ ಅಭ್ಯರ್ಥಿ !

02:30 PM Apr 24, 2023 | Team Udayavani |

ಮಂಗಳೂರು : ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್‌ ಮುಖಂಡ ಅಲ್ತಾಫ್‌ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದಾರೆ.

Advertisement

ಜೆಡಿಎಸ್ ನಾಯಕರ ಪ್ರಕಾರ, ಅಲ್ತಾಫ್‌ ಅವರು ತಮ್ಮ ಮೊಬೈಲ್ ಫೋನನ್ನು ಸಹ ಸ್ವಿಚ್ ಆಫ್ ಮಾಡಿದ್ದಾರೆ, ಅವರ ನಿರ್ಧಾರ ಪಕ್ಷದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ಬಿ ಫಾರಂ ಪಡೆಯಲು ಶಾಸಕ ಬಿ ಎಂ ಫಾರೂಕ್ ಅವರಿಗೆ ಅಲ್ತಾಫ್ ಮನವರಿಕೆ ಮಾಡಿದ್ದರು. ಆದರೆ, ನಾಮಪತ್ರ ಸಲ್ಲಿಸಿದ ಬಳಿಕ ಪಕ್ಷದ ಮುಖಂಡರ ಜತೆ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.

ಎಪ್ರಿಲ್ 22 ರಂದು ಅವರು ನಾಮಪತ್ರ ಹಿಂತೆಗೆದುಕೊಳ್ಳುವ ಸೂಚನೆಯನ್ನು ಪೋಸ್ಟ್ ಮಾಡಲಾಗಿದ್ದು, ಸ್ಥಳೀಯರು ಈ ವಿಷಯದ ಬಗ್ಗೆ ಜೆಡಿಎಸ್ ಮುಖಂಡರಿಗೆ ತಿಳಿಸಿದ್ದಾರೆ. ಕುಂಪಲ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಫೋನ್ ಎರಡು ದಿನಗಳ ಕಾಲ ಸ್ವಿಚ್ ಆಫ್ ಆಗಿದೆ.

ಈ ಹಿಂದೆ ಎಸ್‌ಎಸ್‌ಎಫ್‌ನಲ್ಲಿ ಸಕ್ರಿಯರಾಗಿದ್ದ ಕುಂಪಲ ಅವರು ಜೆಡಿಎಸ್‌ಗೆ ಸೇರಿ ಕಣದಿಂದ ಹಿಂದೆ ಸರಿದಿರುವುದು ಹಲವರನ್ನು ಅಚ್ಚರಿಗೊಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next