Advertisement

SSLC; ರಾಜ್ಯಕ್ಕೆ 5ನೇ ರ್‍ಯಾಂಕ್‌: ಪ್ರತ್ವಿತಾಗೆ IAS ಅಧಿಕಾರಿಯಾಗುವ ಆಸೆ

12:20 AM May 10, 2024 | Team Udayavani |

ತೆಕ್ಕಟ್ಟೆ: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಎಕ್ಸಲೆಂಟ್‌ ಮತ್ತು ಲಿಟ್ಲಸ್ಟಾರ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5ನೇ ರ್‍ಯಾಂಕ್‌ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾಳೆ.

Advertisement

ಶಾಧನಾ ದೇವಾಡಿಗ (616 ) ರಾಜ್ಯ ಮಟ್ಟದಲ್ಲಿ 10ನೆಯ ರ್‍ಯಾಂಕ್‌ಗಳಿಸಿದ್ದು , ಕುಂದಾಪುರ ತಾಲೂಕಿಗೆ 6ನೆಯ ಸ್ಥಾನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಸಾಧಕ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಅವರನ್ನು ಸಮ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಪೋಷಕರು, ಭೋದಕ, ಭೋದಕೇತರ ಸಿಬ್ಬಂದಿ ವರ್ಗ ಮತ್ತು ಚಿರಋಣಿಯಾಗಿದ್ದೇನೆ ಎಂದರು. ಎಮ್‌.ಎಮ್‌.ಹೆಗ್ಡೆ ಎಜುಕೇಶನಲ್‌ ಎಂಡ್‌ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಎಮ್‌. ಮಹೇಶ ಹೆಗ್ಡೆ ಅವರು ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷ ಡಾ|ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್‌ ಕುಮಾರ್‌ಅವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next