Advertisement

ಎಸೆಸೆಲ್ಸಿ , ಪಿಯುಸಿಯಲ್ಲಿ ಅಗ್ರ ಶ್ರೇಣಿಗಾಗಿ ಕರಾವಳಿಯ ತುಡಿತ

01:26 AM Mar 05, 2021 | Team Udayavani |

ಮಂಗಳೂರು: ಕೋವಿಡ್ ಕಾರಣದಿಂದ ಶೈಕ್ಷಣಿಕ ವ್ಯವಸ್ಥೆ ಕಂಗೆಟ್ಟಿದ್ದರೂ ಈ ಬಾರಿಯೂ ಎಸೆಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಈ ಬಾರಿಯೂ ಅಗ್ರಶ್ರೇಣಿ ಕಾಯ್ದುಕೊಳ್ಳಲು ದಕ್ಷಿಣ ಕನ್ನಡ, ಉಡುಪಿ ಜಿಲೆಯ ಶಿಕ್ಷಣ ಇಲಾಖೆ ವಿಶೇಷ ನಿಗಾ ಇರಿಸಿದೆ.

Advertisement

ಈ ಎರಡೂ ಜಿಲ್ಲೆಗಳ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ಶಿಕ್ಷಕರು ಉನ್ನತ ಫಲಿತಾಂಶಕ್ಕಾಗಿ ಈಗಾಗಲೇ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಿದ್ದಾರೆ. ಈ ಬಾರಿ ಎಸೆಸೆಲ್ಸಿ / ಪಿಯುಸಿಯಲ್ಲಿ ಶೇ. 30ರಷ್ಟು ಪಠ್ಯಕ್ರಮ ಕಡಿತಗೊಂಡಿರುವ ಕಾರಣ “ಪ್ರಶ್ನಾ ಬ್ಯಾಂಕ್‌’ ಅನ್ನು ಈ ಬಾರಿ ಕರಾವಳಿ ಭಾಗದಲ್ಲಿ ಹೆಚ್ಚು ಆದ್ಯತೆ ನೆಲೆಯಲ್ಲಿ ಸಿದ್ಧಪಡಿಸಲಾಗುತ್ತಿದೆ.

29 ಅಧಿಕಾರಿಗಳಿಂದ 165 ಶಾಲೆಗಳ ದತ್ತು :

ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ಉತ್ತಮ ಸ್ಥಾನ ಗಳಿಸಬೇಕೆಂಬ ಇರಾದೆಯಿಂದ ತರಗತಿಗೆ ಹಾಜರಾಗದ ಸುಮಾರು 3,000 ಮಕ್ಕಳ ಮನೆಗೆ ಶಿಕ್ಷಕರು, ಅಧಿಕಾರಿಗಳು ಖುದ್ದು ಭೇಟಿ ನೀಡಿ ಅವರ ಮನವೊಲಿಸಿ ತರಗತಿಗೆ ಹಾಜರಾಗುವಂತೆ ಶ್ರಮಿಸುತ್ತಿದ್ದಾರೆ. ಆಯ್ದ 72 ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಅವರ ಮೂಲಕ ಬ್ಲಾಕ್‌ ಮಟ್ಟದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ಹಿಂದೆ ಶೇ. 60ಕ್ಕಿಂತ ಕಡಿಮೆ ಅಂಕ ಪಡೆದ ಶಾಲೆಗಳ ಶಿಕ್ಷಕರಿಗೆ ಪ್ರತ್ಯೇಕವಾಗಿ ತರಬೇತಿ ನೀಡಲಾಗಿದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ವಸತಿ ನಿಲಯದಲ್ಲಿರಿಸಿ ವಿಶೇಷ ತರಬೇತಿ ನೀಡಲೂ ಉದ್ದೇಶಿಸಲಾಗಿದೆ. ಸಂಕಲನಾತ್ಮಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರ ಬಗ್ಗೆ ಸಂಬಂಧಪಟ್ಟ ಶಾಲೆ ವಿಶೇಷ ಒತ್ತು ನೀಡಲಿದೆ. ಒಟ್ಟು 29 ಅಧಿಕಾರಿಗಳ ಮೂಲಕ 165 ಶಾಲೆಗಳನ್ನು ದತ್ತು ಪಡೆದುಕೊಂಡು ಉತ್ತಮ ಫಲಿತಾಂಶಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಕ್ಕಳ ಜತೆಗೆ ಫೋನ್‌ ಇನ್‌! :

Advertisement

ಉಡುಪಿ ಜಿಲ್ಲೆಯಲ್ಲಿ ಸಂಜೆ 5ರಿಂದ 7ರ ವರೆಗೆ “ಫೋನ್‌ ಇನ್‌’ ಎಂಬ ಪರಿಕಲ್ಪನೆಯ ಮೂಲಕ ಮಕ್ಕಳ ಪ್ರಶ್ನೆಗಳಿಗೆ ನುರಿತ ಶಿಕ್ಷಕರು ಉತ್ತರ ನೀಡುವ ವಿಶೇಷ ಪ್ರಯತ್ನ ನಡೆಯುತ್ತಿದೆ. ಪ್ರತೀ ದಿನ 150ಕ್ಕೂ ಅಧಿಕ ವಿದ್ಯಾರ್ಥಿಗಳು ಕರೆ ಮಾಡಿ ಉತ್ತರ ಪಡೆಯುತ್ತಿದ್ದಾರೆ. ರಾಜ್ಯದಲ್ಲಿಯೇ ಅಪೂರ್ವ ಪ್ರಯತ್ನ ಇದಾಗಿದೆ. ಜಿಲ್ಲೆಯ ಶಿಕ್ಷಕರಿಗೆ ಪ್ರೇರಣಾ ಶಿಬಿರ ಆಯೋಜಿಸಿ ತರಬೇತಿ ನೀಡಲಾಗಿದೆ. ಇಲಾಖಾ ಅಧಿಕಾರಿಗಳು, ಶಿಕ್ಷಕರು ಪಾಲಕರ ಜತೆಗೆ ಸಭೆ ನಡೆಸಿರುವುದಲ್ಲದೆ ಮನೆಗೆ ಭೇಟಿ ನೀಡಿ ಫಲಿತಾಂಶ ಉತ್ತಮವಾಗಲು ಮಾರ್ಗದರ್ಶನ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ನಿರಂತರ ಮುಂಚೂಣಿಯಲ್ಲಿ   :

2020ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ “ಎ’ ಗ್ರೇಡ್‌ ಹಾಗೂ ದ.ಕ. ಜಿಲ್ಲೆ  “ಬಿ’ ಗ್ರೇಡ್‌ ಗಳಿಸಿತ್ತು. ಕೆಲವು ವರ್ಷಗಳಿಂದ ಈ ಜಿಲ್ಲೆಗಳು ರಾಜ್ಯದಲ್ಲಿಯೇ ಉತ್ತಮ ಶ್ರೇಣಿಯ ಸ್ಥಾನ ದಾಖಲಿಸುತ್ತಿವೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆ ಜಿಲ್ಲಾವಾರು ಫಲಿತಾಂಶದಲ್ಲಿ ಮುಂಚೂಣಿಯಲ್ಲಿವೆ.

ಉತ್ತಮ ಫಲಿತಾಂಶದ ನಿರೀಕ್ಷೆ :  ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳು ಈ ಬಾರಿ ಅತ್ಯುತ್ತಮ ಸಾಧನೆ ದಾಖಲಿಸಬೇಕೆಂಬ ಆಶಯದಿಂದ ಜನವರಿಯಿಂದಲೇ ವಿವಿಧ ಹಂತದ ಕಾರ್ಯಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ನಡೆಸಲಾಗುತ್ತಿದೆ. ಇಲಾಖೆ, ಶಿಕ್ಷಕರು ಹಾಗೂ ಪೋಷಕರು ಈ ನಿಟ್ಟಿನಲ್ಲಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತಮ ಫಲಿತಾಂಶದ ವಿಶ್ವಾಸವಿದೆ. ಎನ್‌.ಎಚ್‌. ನಾಗೂರು / ಮಲ್ಲೇಸ್ವಾಮಿ, ಡಿಡಿಪಿಐಗಳು, ಉಡುಪಿ, ದ.

Advertisement

Udayavani is now on Telegram. Click here to join our channel and stay updated with the latest news.

Next