Advertisement

ಕರ್ನಾಟಕದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಲ್ಲ : ಸುರೇಶ್ ಕುಮಾರ್

03:37 PM Jun 09, 2020 | sudhir |

ಉಡುಪಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Advertisement

ತಮಿಳುನಾಡು ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿ ಆದೇಶವನ್ನು ಹೊರಡಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವರು ನಮ್ಮ ರಾಜ್ಯದಲ್ಲಿ ಪರೀಕ್ಷೆಯನ್ನು ರದ್ದು ಮಾಡುವ ವಿಚಾರ ಇಲ್ಲ ಬದಲಾಗಿ ಏನಾದರು ಸಮಸ್ಯೆ ಬಂದಲ್ಲಿ ಪರೀಕ್ಷಾ ದಿನಾಂಕವನ್ನು ಬದಲಾಯಿಸುತ್ತೇವೆ ಹೊರತು ಪರೀಕ್ಷೆಯನ್ನಲ್ಲ ಎಂದು ಸ್ಪಷ್ಟಪಡಿಸಿದರು.

ನಿಗದಿತ ದಿನಾಂಕದಂದೇ ಪರೀಕ್ಷೆ ನಡೆಯಲಿದೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ತಿಳಿಸಲಾಗಿದೆ.

ಒಬ್ಬೊಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ಸಿಗಲಿದೆ, ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next